ಉತ್ತರ ಕನ್ನಡದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ವಶಕ್ಕೆ, ಇನ್ನಿಬ್ಬರಿಗೆ ತೀವ್ರ ಶೋಧ

ಉತ್ತರಕನ್ನಡ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಈ ಕೊಲೆ ನಡೆದಿದೆ. ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ನಾಲ್ವರನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಹಾಕಿರುವಂಥ ಸನ್ನಿವೇಶ ಕಂಡುಬಂದಿದೆ. … Continue reading ಉತ್ತರ ಕನ್ನಡದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ವಶಕ್ಕೆ, ಇನ್ನಿಬ್ಬರಿಗೆ ತೀವ್ರ ಶೋಧ