ನಾಲ್ವರು ಅವಿರೋಧ ಆಯ್ಕೆ

blank

ರಾಮದುರ್ಗ: ಪಟ್ಟಣದಲ್ಲಿ ಡಿ.8 ರಂದು ನಡೆಯಲಿರುವ ಪಿಎಲ್‌ಡಿ ಬ್ಯಾಂಕ್‌ನ 15 ಕ್ಷೇತ್ರಗಳ ನಿರ್ದೇಶಕರ ಆಯ್ಕೆ ಪೈಕಿ ನಾಲ್ಕು ಕ್ಷೇತ್ರಗಳಿಂದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ನಾಲ್ವರು ಸದಸ್ಯರು ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಹಲಗತ್ತಿ ಕ್ಷೇತ್ರದಿಂದ ಕೀರಪ್ಪ ದಾಡಿಭಾಂವಿ, ಮುದೇನೂರ- ಕೃಷ್ಣಪ್ಪ ಲಮಾಣಿ, ಬಟಕುರ್ಕಿ- ಶಿವನಗೌಡ ಪಾಟೀಲ ಹಾಗೂ ಕುಳ್ಳೂರ ಕ್ಷೇತ್ರದಿಂದ ರಾಜೇಶ ಮರಲಿಂಗನವರ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹಾಗೂ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ನೇತೃತ್ವದಲ್ಲಿ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು.

ಅವಿರೋಧವಾಗಿ ಆಯ್ಕೆಯಾದ ನೂತನ ನಿರ್ದೇಶಕರನ್ನು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಸನ್ಮಾನಿಸಿದರು. ಬಿಜೆಪಿ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಜಿಪಂ ಮಾಜಿ ಸದಸ್ಯ ಮಾರುತಿ ತುಪ್ಪದ, ಪುರಸಭೆ ಸದಸ್ಯ ನಾಗರಾಜ ಕಟ್ಟಿಮನಿ ಇತರರಿದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…