More

    ಕಾಂಗ್ರೆಸ್​ನಿಂದ ಬಲಗೈ ಸಮುದಾಯಕ್ಕೆ ವಂಚನೆ

    ಕೋಲಾರ: ಪರಿಶಿಷ್ಟ ಜಾತಿ ಮತ್ತು ಪಂಡಗಳ ಬಲಗೈ ಸಮುದಾಯವನ್ನು ಕಾಂಗ್ರೆಸ್​ ನಿರಂತರವಾಗಿ ವಂಚಿಸಿಕೊಂಡು ಬಂದಿದೆ ಎಂದು ಜೆಡಿಎಸ್​ ಮುಖಂಡ ಬಾಲಾಜಿ ಚನ್ನಯ್ಯ ಆರೋಪಿಸಿದರು.

    ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ&ಜೆಡಿಎಸ್​ ಬಲಗೈ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಿವೆ. ಆದರೆ ಕಾಂಗ್ರೆಸ್​ ಸಮಾಜದಲ್ಲಿ ಜಾತಿ ರಾಜಕಾರಣ ಹುಟ್ಟಿ ಹಾಕಿ, ಜಾತಿ, ಧರ್ಮಗಳ ನಡುವೆ ಒಡಕು ಉಂಟು ಮಾಡಿದೆ ಎಂದು ದೂರಿದರು.
    1952ರಿಂದಲೂ ಕಾಂಗ್ರೆಸ್​ ಎಡಗೈ ಸಮುದಾಯಕ್ಕೆ ನೀಡಿದ ಪ್ರಾತಿನಿಧ್ಯವನ್ನು ಬಲಗೈ ಸಮುದಾಯಕ್ಕೆ ನೀಡಿಲ್ಲ. 4 ಲಕ್ಷಕ್ಕೂ ಹೆಚ್ಚು ಮತದಾರರು ಇರುವ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್​ ಟಿಕೆಟ್​ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇದು ಸಚಿವ ಕೆ.ಎಚ್​.ಮುನಿಯಪ್ಪ ಅವರನ್ನು ರಾಜಕೀಯದಿಂದ ಮುಗಿಸಲು ಜಿಲ್ಲೆಯ ಕೆಲ ಕಾಂಗ್ರೆಸ್​ ಮುಖಂಡರು ಆಡಿದ ನಾಟಕ ಎಂಬುದು ಸಮುದಾಯಕ್ಕೆ ಮನವರಿಕೆಯಾಗಿದೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
    ಸಚಿವ ಡಾ.ಎಂ.ಸಿ.ಸುಧಾಕರ್​, ಶಾಸಕ ಕೊತ್ತೂರು ಜಿ.ಮಂಜುನಾಥ್​, ವಿಧಾನಪರಿಷತ್​ ಸದಸ್ಯ ಎಂ.ಎಲ್​.ಅನಿಲ್​ ಕುಮಾರ್​ ಬಲಗೈ ಸಮುದಾಯಕ್ಕೆ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಹೈಕಮಾಂಡ್​ಗೆ ಬೆದರಿಕೆ ಹಾಕಿದರು. ಆಂಧ್ರದಿಂದ ಬೆಂಗಳೂರಿಗೆ ವಲಸೆ ಬಂದಿರುವ ಗೌತಮ್​ ಅವರಿಗೆ ಟಿಕೆಟ್​ ನೀಡಿದ್ದು, ಈಗ್ಯಾಕೆ ರಾಜೀನಾಮೆ ನೀಡಲಿಲ್ಲ, ಇದೆಲ್ಲ ನಾಟಕವಷ್ಟೇನಾ ಎಂದು ಪ್ರಶ್ನಿಸಿದರು.
    ತಾಪಂ ಮಾಜಿ ಸದಸ್ಯ ಮುದುವಾಡಿ ಮಂಜುನಾಥ್​, ಜಿಲ್ಲಾ ಜೆಡಿಎಸ್​ ಎಸ್ಸಿ ಟಕದ ಅಧ್ಯಕ್ಷ ರಮಾನಂದ, ಜಿಲ್ಲಾ ಬಿಜೆಪಿ ಎಸ್ಸಿ ಟಕದ ಅಧ್ಯಕ್ಷ ವೆಂಕಟೇಶ್​, ಮುಖಂಡರಾದ ನಾಗರಾಜ, ನಾರಾಯಣಸ್ವಾಮಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts