ಎಲ್ಲರೂ ಹಿರಿಯರ ಕಾಳಜಿ ಮಾಡಲಿ, ವೈದ್ಯಾಧಿಕಾರಿ ಕೆ.ಎಸ್.ರಡ್ಡಿ ಸಲಹೆ

eye check-up camp

ಕುಷ್ಟಗಿ: ವೈಯಕ್ತಿಕ ಕಾಳಜಿ ಜತೆ ಮನೆಯ ಹಿರಿಯ ಕಾಳಜಿ ಮಾಡಬೇಕು ಎಂದು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕೆ.ಎಸ್.ರಡ್ಡಿ ಹೇಳಿದರು.

ಪಟ್ಟಣದ ಬಸವ ಭವನದಲ್ಲಿ ನಿವೃತ್ತ ನೌಕರರ ಸಂಘ, ಕೊಪ್ಪಳದ ಡಾ.ಎಂ.ಎಂ.ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹಾಗೂ ವಿನಾಯಕ ನೇತ್ರ ಸೇವಾ ಸಂಸ್ಥೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ಕುಟುಂಬ ಸದಸ್ಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿದರು. ವಯಸ್ಸಾದಂತೆ ಕಣ್ಣಿನ ಸಮಸ್ಯೆ ಗಾಢವಾಗಿ ಕಾಡುತ್ತದೆ. ಸಮಸ್ಯೆ ಹೆಚ್ಚಾದಂತೆ ಮತ್ತೊಬ್ಬರ ಮೇಲೆ ಅವಲಂಬಿತರಾಗುವುದು ಸಹಜ. ಇಂಥ ಸಮಯದಲ್ಲಿ ಕಿರಿಯರು ಹಿರಿಯರ ಕಾಳಜಿ ಮಾಡಬೇಕು ಎಂದು ಸಲಹೆ ನೀಡಿದರು.

ಬಸವ ಸಮಿತಿ ತಾಲೂಕು ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಟಿ. ಬಸವರಾಜ, ನಿವೃತ್ತ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ಎಚ್. ಹಿರೇಮಠ, ಕಾರ್ಯದರ್ಶಿ ಜೆ.ಶರಣಪ್ಪ, ಖಜಾಂಚಿ ಕಳಕಪ್ಪ ರಡ್ಡೇರ್, ನಿರ್ದೇಶಕ ಜಿ.ಡಿ. ಪಾಟೀಲ್, ಜಿಲ್ಲಾ ಸಂಚಾಲಕಿ ಜೆ.ಡಿ.ಉಪ್ಪಿನ್, ನೌಕರರ ಸಂಘದ ನಿರ್ದೇಶಕ ಬಾಲಾಜಿ ಬಳಿಗಾರ, ಡಾ.ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಡಾ.ಶ್ರುತಿ, ಪ್ರಮುಖರಾದ ಅಹ್ಮದ್ ಹುಸೇನ್, ಬಸವರಾಜ ಪಲ್ಲೇದ್ ಇತರರಿದ್ದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…