ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಉಚಿತ ಆಹಾರ ಧಾನ್ಯಗಳ ವಿತರಣೆ ಇನ್ನೂ ಮುಂದುವರಿಯಲಿದೆ. ಕೇಂದ್ರ ಸಚಿವ ಸಂಪುಟ ಈ ಬಗ್ಗೆ ಶುಕ್ರವಾರ ಅನುಮೋದನೆ ನೀಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 81.3 ಕೋಟಿ ಬಡವರಿಗೆ ನೀಡುತ್ತಿರುವ ಪಡಿತರ ವಿತರಣೆ 2023ರ ಡಿಸೆಂಬರ್ವರೆಗೂ ಮುಂದುರಿಯಲಿದೆ.
ಈ ಪಡಿತರವನ್ನು ಉಚಿತವಾಗಿ ವಿತರಿಸಲು ಸುಮಾರು 2 ಲಕ್ಷ ಕೋಟಿ ರೂಪಾಯಿ ಖರ್ಚಾಗಲಿದ್ದು, ಅದನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಸದ್ಯ ಸರ್ಕಾರ ಪ್ರತಿಯೊಬ್ಬರಿಗೆ 5 ಕೆ.ಜಿ. ಆಹಾರ ಧಾನ್ಯಗಳನ್ನು ವಿತ್ತರಿಸುತ್ತಿದ್ದು, ಪ್ರತಿ ಕೆ.ಜಿ. ಕೆ.ಜಿ. 2ರಿಂದ 3 ರೂಪಾಯಿ ಖರ್ಚಾಗುತ್ತಿದೆ. ಅಂತ್ಯೋದಯ ಅನ್ನ ಯೋಜನೆ ವ್ಯಾಪ್ತಿಗೆ ಬರುವ ಕುಟುಂಬಗಳಿಗೆ ಮಾಸಿಕ 35 ಕೆಜಿ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ.
ಡಾ.ರಾಜ್ ಕುಟುಂಬದ ವಿರುದ್ಧ ಹಗುರ ಮಾತು ಆರೋಪ; ಪುನೀತ್ ಕೆರೆಹಳ್ಳಿ ಮೇಲೆ ದಾಳಿ, ಅಂಗಿ ಹರಿದು ಹೊಯ್ಕೈ
ಮಾಸ್ಕ್ ಧರಿಸಿಕೊಂಡು ದೇವರ ದರ್ಶನ ಪಡೆದ ಸಿದ್ದರಾಮಯ್ಯ; ದೇವಸ್ಥಾನದ ಅರ್ಚಕರ ಮನೆಯಲ್ಲಿ ಉಪಾಹಾರ