ಎಲ್ಲೆಡೆ ವ್ಯಾಪಿಸಿರುವ ಕರೊನಾ ಸಂಕಷ್ಟ, ರಾಜಕೀಯ ಬಿಕ್ಕಟ್ಟಿನ ನಡುವೆಯೂ ಮಹಿಳೆಯರಿಗಾಗಿ ವಿಶೇಷ ಉಡುಗೊರೆಯೊಂದನ್ನು ರಾಜಸ್ಥಾನ ಸರ್ಕಾರ ಘೋಷಿಸಿದೆ.
ರಕ್ಷಾ ಬಂಧನ ದಿನದಂದು ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಸಂಚರಿಸಬಹುದು. ರಾಜ್ಯಾದ್ಯಂತ ಸಂಚರಿಸುವ ಬಸ್ಗಳಲ್ಲಿ ಈ ಸೌಲಭ್ಯ ಪಡೆಯಬಹುದು ಎಂದು ಸಿಎಂ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ.
ಇದನ್ನೂ ಓದಿ; ರಾಜಸ್ಥಾನದಲ್ಲಿ ‘ಕುದುರೆ ವ್ಯಾಪಾರ’ಕ್ಕೆ ಅನ್ಲಿಮಿಟೆಡ್ ಆಫರ್; ವಿಧಾನಸಭೆ ಅಧಿವೇಶನ ನಿಗದಿ ಬಳಿಕ ಬೆಲೆಯಲ್ಲಿ ಭಾರಿ ಏರಿಕೆ
ಆದರೆ, ಈ ಸೌಲಭ್ಯ ಹವಾನಿಯಂತ್ರಿತ, ವೋಲ್ವೋ ಹಾಗೂ ಆಲ್ ಇಂಡಿಯಾ ಪರ್ಮಿಟ್ ಪಡೆದಿರುವ ಬಸ್ಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ರಾಜ್ಯದ ಒಳಗೆ ಎಲ್ಲಿ ಬೇಕಾದರೂ ಸಂಚರಿಸಬಹುದು ಎಂದು ಸರ್ಕಾರ ಹರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಕ್ಷಾ ಬಂಧನ ದಿನಂದು ಸಂಚರಿಸುವ ಮಹಿಳೆಯರ ಟಿಕೆಟ್ ಶುಲ್ಕವನ್ನು ಸರ್ಕಾರದಿಂದ ಭರಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ.