ಮೈಸೂರು: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ಕೊನೆಗೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕ್ಯಾತಮಾರನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಸತೀಶ್(22) ಕೊಲೆಯಾದ ದುರ್ದೈವಿ. ಮಧು ಹಾಗೂ ಕಿರಣ್ ಎಂಬುವವರೇ ಆರೋಪಿಗಳು. ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಮದ್ಯದ ಅಮಲಿನಿಂದ ಅತಿಯಾದ ವೇಗದಲ್ಲಿ ಕಾರು ಚಲಾಯಿಸಿ ದುರಂತ ಸಾವಿಗೀಡಾದ ವ್ಯಕ್ತಿ
ನಿನ್ನೆ ಸ್ನೇಹಿತರ ನಡುವೆ ಎಣ್ಣೆ ಪಾರ್ಟಿ ನಡೆಯುವಾಗ ಲವ್ ವಿಚಾರ ಪ್ರಸ್ತಾಪವಾಗಿ, ಬಳಿಕ ಗಲಾಟೆಗೆ ಆರಂಭವಾಗಿ, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಉದಯಗಿರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)
ಇದನ್ನೂ ಓದಿ: ಆನ್ಲೈನ್ ಚಾಟಿಂಗ್ನಲ್ಲಿ 18 ತುಂಬದ ಹುಡುಗರ ಪೋಲಿ ಮಾತು ಕೇಳಿ ಬೆಚ್ಚಿಬಿದ್ದ ಪೊಲೀಸರು!