More

    ಗ್ಯಾರಂಟಿಗಳಿಂದ ಜನರಿಗೆ ಸಂಕಷ್ಟ

    ರಾಯಬಾಗ: ಬಿಜೆಪಿ ಸರ್ಕಾರ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಬಂದ್ ಮಾಡಿದೆ ಎಂದು ಶಾಸಕ ಡಿ.ಎಂ.ಐಹೊಳೆ ಆರೋಪಿಸಿದರು.

    ತಾಲೂಕಿನ ಬಾವನಸವದತ್ತಿ ಗ್ರಾಮದಲ್ಲಿ ಕರ್ನಾಟಕ ಆದಿಜಾಂಬವ ಅಭಿವದ್ಧಿ ನಿಗಮದ ಸಮದ್ಧಿ ಯೋಜನೆಯಡಿ ಮಂಜೂರಾದ ಬಟ್ಟೆ ಅಂಗಡಿ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ರೈತರು ಮತ್ತು ಸಾರ್ವಜನಿಕರು ಕಷ್ಟ ಅನುಭವಿಸುವಂತಾಗಿದೆ. ಸರ್ಕಾರ ಸಮರ್ಪಕ ವಿದ್ಯುತ್ ನೀಡದ್ದರಿಂದ ಬೆಳೆಗಳು ಕಮರಿ ಹೋಗುತ್ತಿವೆ. ವಾರದಲ್ಲಿ ಸರಿಯಾಗಿ ವಿದ್ಯುತ್ ನೀಡದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ಓಂಕಾರ ಆಶ್ರಮದ ಶಿವಶಂಕರ ಸ್ವಾಮೀಜಿ, ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಚಣ್ಣನವರ, ಗ್ರಾಪಂ ಅಧ್ಯಕ್ಷ ರಾಮಚಂದ್ರ ಕಾಟೆ, ಅನಿಲ ಹಂಜೆ, ಮಹಾವೀರ ಪಾಟೀಲ, ಅಜಿತ ಖೇಮಲಾಪುರೆ, ಸದಾಶಿವ ಘೋರ್ಪಡೆ, ಮಹೇಶ ಕರಮಡಿ, ಸತ್ಯಪ್ಪ ಭೀಷ್ಟೆ, ಭೈರು ಚೌಗಲೆ, ಅಜಿತ ಕುಂಬಾರ, ದೇವೇಂದ್ರ ಗಾಂಜೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts