ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಗಗನಕ್ಕೇರಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಡಿತಗೊಳಿಸುವ ಮೂಲಕ ಸ್ವಲ್ಪ ಮಟ್ಟಿನ ಹೊರೆಯನ್ನು ಇಳಿಸಿದ್ದಾರೆ. ಲೀಟರ್ ಪೆಟ್ರೋಲ್ಗೆ 5 ರೂ. ಹಾಗೂ ಡೀಸೆಲ್ ಬೆಲೆಯಲ್ಲಿ 3 ರೂ. ಇಳಿಕೆ ಮಾಡಿದ್ದಾರೆ.
ಇಂಧನ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಘೋಷಿಸುವುದಾಗಿ ಹೇಳಿದ್ದ ವಾರದ ಬಳಿಕ ಈ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ತೈಲ ಬೆಲೆ ಇಳಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 6,000ಕೋಟಿ ರೂ. ಹೊರೆ ಬೀಳಲಿದೆ ಎಂದು ಶಿಂಧೆ ಹೇಳಿದ್ದರು. ಆದಾಗ್ಯೂ ತೈಲ ಬೆಲೆ ಕಡಿತಗೊಳಿಸುವ ಮೂಲಕ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದಾರೆ. (ಏಜೆನ್ಸೀಸ್)
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ಗೆ ಕೋವಿಡ್ ಸೋಂಕು: ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ
ವಿಶ್ವದ ಶ್ರೇಷ್ಠ ಸ್ಥಳಗಳ ಪೈಕಿ ಭಾರತದ ಈ ಎರಡು ರಾಜ್ಯಗಳ ನಗರಗಳಿಗೂ ಸ್ಥಾನ! ಇಲ್ಲಿದೆ ವಿವರ