ಗಜೇಂದ್ರಗಡ ಪ್ರಥಮ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ

blank

ನರೇಗಲ್ಲ: ನಿಡಗುಂದಿಕೊಪ್ಪದಲ್ಲಿ ಫೆ. 20ರಂದು ಅಭಿನವ ಚನ್ನಬಸವ ಸ್ವಾಮೀಜಿ ಉದ್ದೇಶಿಸಿರುವ ಗಜೇಂದ್ರಗಡ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಶಾಸಕ ಜಿ. ಎಸ್. ಪಾಟೀಲ ಹೇಳಿದರು.

ಸಮೀಪದ ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದ ಮಠದಲ್ಲಿ ಸೋಮವಾರ ಆಯೋಜಿಸಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 15 ದಿನಗಳ ಹಿಂದೆ ಆಯೋಜಿಸಿದ್ದ ಜಿಲ್ಲಾ ಸಮ್ಮೇಳನ ಯಶಸ್ವಿಯಾಗಿದೆ. ಪೂಜ್ಯರ ಆಸೆಯಂತೆ ತಾಲೂಕು ಸಮ್ಮೇಳನ ನಡೆಸಲು ಜಿಲ್ಲಾ ಕಸಾಪ ಘಟಕ ಮತ್ತು ತಾಲೂಕು ಘಟಕಗಳು ಸಜ್ಜಾಗಿರುವುದು ವಿಶೇಷ ಆನಂದವನ್ನುಂಟು ಮಾಡಿದೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಆಧ್ಯಾತ್ಮಿಕ ಜಾತ್ರೆಯೊಂದಿಗೆ ಅಕ್ಷರ ಜಾತ್ರೆ ನೆರವೇರಿಸಲು ಮುಂದಾಗಿರುವ ಶ್ರೀಗಳ ನಿರ್ಧಾರ ಸ್ವಾಗತಾರ್ಹ. ಜಾತ್ರೆಯನ್ನು ಈ ರೀತಿ ವಿಶೇಷ ವಿಧಾಯಕ ಕಾರ್ಯಕ್ರಮಗಳ ಮೂಲಕ ಆಚರಿಸಿದರೆ ಅದಕ್ಕೊಂದು ಔಚಿತ್ಯ ಬರುತ್ತದೆ. ಎಲ್ಲ ಸ್ವಾಮೀಜಿಗಳೂ ಇಂತಹ ಕಾರ್ಯಕ್ಕೆ ಮುಂದಾಗಬೇಕು ಎಂದರು.

ಅಭಿನವ ಚನ್ನಬಸವ ಸ್ವಾಮೀಜಿ ಆಶೀರ್ವಚನ ನೀಡಿದರು. ನಿವೃತ್ತ ಶಿಕ್ಷಕ ಅರುಭ ಕುಲಕರ್ಣಿ ಮಾತನಾಡಿದರು. ತಾಲೂಕಾಧ್ಯಕ್ಷ ಅಮರೇಶ ಗಾಣಿಗೇರ, ಎಂ.ವಿ. ವೀರಾಪೂರ, ವೀರಣ್ಣ ಶೆಟ್ಟರ, ವಿ.ಬಿ. ಸೋಮನಕಟ್ಟಿಮಠ, ಡಾ. ಕೆ.ಬಿ. ಧನ್ನೂರ, ಕಿಶೋರಬಾಬು ನಾಗರಕಟ್ಟೆ, ಶರಣಪ್ಪ ಬೆಟಗೇರಿ, ಎಸ್.ಎಸ್. ಪಸಾರದ, ಎಂ.ಎ. ಹಾದಿಮನಿ, ಮಂಜುಳಾ ರೇವಡಿ, ಅಂದಪ್ಪ ಬಿಚ್ಚೂರ, ಇತರರಿದ್ದರು. ಶಿಕ್ಷಕ ಡಿ.ಎಸ್. ಬಡಿಗೇರ ಕಾರ್ಯಕ್ರಮ ನಿರ್ವಹಿಸಿದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…