ತುಮಕೂರು: ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರಿಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ಅವರ ಮೀಸೆ ಮೇಲೆ ಕಣ್ಣು ಬಿದ್ದಿದೆ. ಯಾವುದೇ ವೇದಿಕೆಗೆ ಹೋದರು ಮೀಸೆಯ ಬಗ್ಗೆ ಲೇವಡಿ ಮಾಡುವುದನ್ನು ನೋಡಿದರೆ, ಮೀಸೆಗೆ ಹೆದರಿದಂತೆ ಕಾಣುತ್ತದೆ.
ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗರ ಸಮಾವೇಶದಲ್ಲಿ ಮಾಜಿ ಡಿಸಿಎಂ ರೋಷಾವೇಶದ ಭಾಷಣ ಮಾಡಿದರು.
ಬನ್ರೋ ನನ್ ಮಕ್ಳಾ ಯಾರು ಬರ್ತೀರೋ ಬನ್ನಿ ಎಂದು ಸವಾಲೆಸೆದ ಪರಮೇಶ್ವರ್, ಯಾವ ಮೀಸೆನೂ ಇಲ್ಲ ಗೀಸೆಗೂ ನಾನು ಹೆದರುವುದಿಲ್ಲ ಎಂದು ಅಬ್ಬರದ ಭಾಷಣ ಮಾಡುವ ಮೂಲಕ ಪರೋಕ್ಷವಾಗಿ ಕೊರಟಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿಗೆ ಬನ್ನಿ ಎಂದು ಸಾವಿರಾರು ಜನ ನನ್ನನ್ನು ಕರೆದರು. ಆದರೆ, ನಾನು ಕೊರಟಗೆರೆ ಕ್ಷೇತ್ರದಿಂದಲೇ ಸ್ಪರ್ಧೆ ಮಾಡ್ತೀನಿ ಎಂದು ಹೇಳಿದರು.
ಇನ್ನು ಬಿಜೆಪಿ ಕೊರಟಗೆರೆ ಕ್ಷೇತ್ರವನ್ನು ಕಬ್ಜ ಮಾಡಲು ಮುಂದಾಗಿದೆ. ವಿಜಯ ಸಂಕಲ್ಪ ಯಾತ್ರೆ, ಯುವ ಮೋರ್ಚಾ ಸಮಾವೇಶ ನಡೆಸುವ ಮೂಲಕ ಬಿಜೆಪಿ ಮತಗಳನ್ನು ಸೆಳೆಯುತ್ತಿದೆ. ಇಷ್ಟು ವರ್ಷ ಕೊರಟಗೆರೆಯಲ್ಲಿ ಕಾಂಗ್ರೆಸ್ಗೆ ಕೇವಲ ಜೆಡಿಎಸ್ ಮಾತ್ರ ಪ್ರತಿಸ್ಪರ್ಧಿ ಆಗಿತ್ತು. ಆದರೆ, ಈಗ ಬಿಜೆಪಿಯ ಅನಿಲ್ ಕುಮಾರ್ ಪ್ರಬಲ ಪೈಪೋಟಿ ಕೊಡುವ ಸಾಧ್ಯತೆ ಇದೆ.
ಕಳೆದ ಭಾನುವಾರ ಬಿ.ವೈ.ವಿಜಯೇಂದ್ರ, ತೇಜಸ್ವಿ ಸೂರ್ಯ ಉಪಸ್ಥಿತಿಯಲ್ಲಿ ಬೃಹತ್ ಸಮಾವೇಶವನ್ನು ಅನಿಲ್ ಕುಮಾರ್ ಅವರು ನಡೆಸಿದ್ದಾರೆ. ಹಾಗಾಗಿ ಪದೇ ಪದೇ ಅನಿಲ್ ಕುಮಾರ್ ಅವರ ಮೀಸೆ ಬಗ್ಗೆ ಪರಮೇಶ್ವರ್ ಅವರು ಲೇವಡಿ ಮಾಡುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)
ನಟಿ ಮೀನಾಗೆ ಈ ನಟನ ಮೇಲೆ ನಿಜವಾಗಿ ಲವ್ ಆಗಿತ್ತಂತೆ! ಮದ್ವೆ ದಿನ ಕಣ್ಣೀರು ಸಹ ಹಾಕಿದ್ದರಂತೆ