ಗಬ್ಬೂರು ತಾಲೂಕು ಕೇಂದ್ರ ಮಾಡಲಿ

blank

ದೇವದುರ್ಗ: ಹಿಂದಿನ ಬಿಜೆಪಿ ಸರ್ಕಾರ ಜನರ ಅಭಿಪ್ರಾಯ ಪಡೆಯದೆ ಅವೈಜ್ಞಾನಿಕವಾಗಿ ರಚನೆ ಮಾಡಿರುವ ಅರಕೇರಾ ತಾಲೂಕನ್ನು ಸರ್ಕಾರ ರದ್ದು ಮಾಡಬೇಕು ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ವಿ.ಎಂ.ಮೇಟಿ ಒತ್ತಾಯಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಜಿ ಸಚಿವ ಕೆ.ಶಿವನಗೌಡ ನಾಯಕ ರಾಜಕೀಯ ಪ್ರಭಾವ ಬಳಸಿಕೊಂಡು ಜನರ ಅಭಿಪ್ರಾಯ ಪಡೆಯದೆ ಅರಕೇರಾವನ್ನು ಹೊಸ ತಾಲೂಕು ಎಂದು ಘೋಷಿಸಿದ್ದಾರೆ. ಆದರೆ, ಜಾಲಹಳ್ಳಿ, ಗಬ್ಬೂರು ತಾಲೂಕು ರಚಿಸಲು ಜನರು ಹೋರಾಟ ನಡೆಸಿದ್ದರು. ಈ ಎರಡು ಹೋಬಳಿ ಕಡೆಗಣಿಸಿ ಅರಕೇರಾ ತಾಲೂಕು ರಚಿಸಲಾಗಿದೆ.ದೇವದುರ್ಗಕ್ಕೆ ಸಮೀಪವಿರುವ ನೂರಾರು ಹಳ್ಳಿಗಳು ಅರಕೇರಾಗೆ ಸೇರಿಸಲಾಗಿದೆ. ಇದನ್ನು ಖಂಡಿಸಿ ಹಲವು ಗ್ರಾಪಂಗಳು ಹೋರಾಟಕ್ಕೆ ಮುಂದಾಗಿವೆ. ಅರಕೇರಾದಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಸಿರವಾರ, ಮಾನ್ವಿಗೆ ಹೋಗುವ ದುಃಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.

ಶಿವನಗೌಡ ನಾಯಕ ಏಕಪಕ್ಷೀಯ ನಿರ್ಧಾರಕ್ಕೆ 2023ರ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಪಾಠ ಕಲಿಸಿದ್ದಾರೆ. ಕೂಡಲೇ ಸರ್ಕಾರ ಮಧ್ಯ ಪ್ರವೇಶ ಮಾಡಿ ಅರಕೇರಾ ತಾಲೂಕು ಕೇಂದ್ರವನ್ನು ರದ್ದುಮಾಡಬೇಕು. ಗಬ್ಬೂರು ತಾಲೂಕು ಆಗಲು ಎಲ್ಲ ಅರ್ಹತೆ ಹೊಂದಿದ್ದು ಹೊಸ ತಾಲೂಕು ಆಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ತಾಪಂ ಮಾಜಿ ಸದಸ್ಯ ಗೋವಿಂದರಾಯ, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಮರಿಲಿಂಗಪ್ಪ ಕೊಳ್ಳೂರು, ಆಂಜನೇಯ ಬಡಿಗೇರ, ಮಂಜುನಾಥ ಹೇರುಂಡಿ ಇತರರಿದ್ದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…