More

    ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚಿಸಿದ್ದಾರೆ: ಪ್ರೊ. ಗಿರಿರಾಜ್

    ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಇಂದು ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚಿಸಿದ್ದಾರೆ ಎಂದು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಕೆ ಗಿರಿರಾಜ ಕುಮಾರ ಹಂಚಿಕೊಂಡರು ಕನ್ನಡ ಮತ್ತು ಸಂಸ್ಕೃತ ಇಲಾಖೆ ಗದಗ ಆದರ್ಶ ಶಿಕ್ಷಣ ಸಮಿತಿಯ ಶ್ರೀ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್, ಐ ಕ್ಯೂ ಎ ಸಿ ಮತ್ತು ಕನ್ನಡ ವಿಭಾಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಮಾತನಾಡಿ ಅರ್ಥ ಪೂರ್ಣ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನೀಡಿದ್ದಾರೆ ಅವರ ಕಠಿಣ ಶ್ರಮದಿಂದಾಗಿ ಶೋಷಿತ ಸಮುದಾಯಗಳು ರೈತರು ಮಹಿಳೆಯರು ಕಾರ್ಮಿಕರು ಇತರ ವರ್ಗದವರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಇಂದಿನ ಯುವ ಜನತೆಗೆ ಅಂಬೇಡ್ಕರ್ ಅವರು ಮಾದರಿಯಾಗಿದ್ದು ಅವರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ತಮ್ಮ ಮಾತುಗಳಲ್ಲಿ ಹಂಚಿಕೊಂಡರು.

    ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ವೀರಯ್ಯಸ್ವಾಮಿಯವರು ಮಾತನಾಡಿ ಅಂಬೇಡ್ಕರ್ ಅವರ ವಿಚಾರಗಳನ್ನು ಅರಿತುಕೊಂಡು ವಿದ್ಯಾರ್ಥಿಗಳು ಅವರ ಪುಸ್ತಕಗಳನ್ನು ಓದುವ ಮೂಲಕ ಪ್ರಜ್ಞಾವಂತರಾಗಬೇಕು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು ಹಾಗೆ ಭಾರತದ ಸಂವಿಧಾನವು ನಮಗೆ ನೈತಿಕ ಮತ್ತು ಸದ್ಗುಣದ ಜೀವನದ ವಿಶಾಲ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಸಂವಿಧಾನದ ಆತ್ಮವು ಭವಿಷ್ಯದಲ್ಲಿ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ನಾವು  ಭಾವಿಸೋಣ ದೇಶದ ಪ್ರಜೆಗಳಾದ ನಾವು ಸಮಾಜವಾದಿ, ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನು ನಿರ್ಮಿಸುವ ಭರವಸೆಯನ್ನು ಒಳಗೊಂಡಂತೆ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಯುವಕರು ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡರೆ ದೇಶ ಎಲ್ಲ ರಂಗಗಳಲ್ಲಿ ಪ್ರಗತಿ ಸಾಧಿಸುತ್ತದೆ ಅಷ್ಟೇ ಅಲ್ಲದೆ

    ಮಹಿಳೆಯರಿಗೆ ಉನ್ನತ ಶಿಕ್ಷಣದ ಕೊರತೆ, ಬಾಲ್ಯ ವಿವಾಹ ಮತ್ತು ಅಪೌಷ್ಟಿಕತೆಯಂತಹ ಹಲವಾರು ಸಾಮಾಜಿಕ ಅನಿಷ್ಟಗಳಿಂದ ನಾವು ಬಳಲುತ್ತಿದ್ದೇವೆ. ಈ ದುಶ್ಚಟಗಳ ನಿರ್ಮೂಲನೆಗೆ ನಾವೆಲ್ಲರೂ ಶ್ರಮಿಸಬೇಕು 

    ಇಂದಿನ ಯುವಕರು ಕ್ರೀಡೆ, ಕಲೆ, ಸಂಗೀತ ಮತ್ತು ಸಾಹಿತ್ಯದಂತಹ ವೈವಿಧ್ಯಮಯ ಆಸಕ್ತಿಗಳನ್ನು ಹೊಂದಿದ್ದಾರೆ. ಅವರು ವಿವಿಧ ಸಹಪಠ್ಯ ಕೌಶಲ್ಯಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದ ಬಗ್ಗೆ ತಿಳುವಳಿಕೆಯುಳ್ಳ ಆಯ್ಕೆಗಳನ್ನು ಮಾಡಬೇಕು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ನಮ್ಮ ಮಾತುಗಳಲ್ಲಿ ಹೇಳಿದರು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ ವಿ ಕುಷ್ಟಗಿ ಅವರು ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಚಾಲನೆ ನೀಡಿದರು ವೇದಿಕೆ ಮೇಲೆ ಮಹಾವಿದ್ಯಾಲಯದ ಉಪ ಪ್ರಾಚಾರ್ಯ, ಐ ಕ್ಯೂ ಏ ಸಿ ಕೋ ಆರ್ಡಿನೇಟರ್ ಡಾ. ವಿ. ಟಿ ನಾಯ್ಕರ್ , ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ, ಬಾಹುಬಲಿ ಜೈನರ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯೊಂದಿಗೆ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನ ಪತ್ರ ನೀಡಿ ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts