ಸಮುದಾಯ ಬದು ನಿರ್ಮಾಣ ಕಾಮಗಾರಿಯ ಯಶಸ್ಸು / ಹೊಲದ ರೈತರ ಮೊಗದಲ್ಲಿ ಸಂತಸ / ದಿನಕ್ಕೆ 370 ರೂ. 

ಗದಗ: ತಾಲೂಕಿನ ಬಹುಪಾಲು ರೈತರ ಜಮೀನುಗಳಲ್ಲಿ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಂದಕ ಬದು ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಸುರಿದ ಕೆಲವು ಗ್ರಾಮಗಳಲ್ಲಿ ಸುರಿದ ಮಳೆಗೆ ಕಂದಕಗಳು ನೀರು ತುಂಬಿಕೊAಡಿರುವುದು ಯೋಜನೆ ಶ್ರಮಿಸಿದ ರೈತರ ಮೊಗದಲ್ಲಿ ಸಂತಸ ಚಿಮ್ಮುವಂತೆ ಮಾಡಿದೆ.
ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಅಭಿವೃದ್ಧಿಗೆ ಇರುವ ಪ್ರಮುಖ ಯೋಜನೆ ಆಗಿದೆ. ಇದು ರೈತರಿಗೆ ವರದಾನವಾಗಿರುವುದರ ಜೊತೆಗೆ ಜಮೀನಿನ ಫಲವತ್ತತೆ ಹೆಚ್ಚಳಕ್ಕೆ ಪೂರಕವಾಗಿದೆ. ಇದರಲ್ಲಿ ಗ್ರಾಮೀಣರು ವೈಯಕ್ತಿಕ ಕಾಮಗಾರಿಗಳ ಮೂಲಕ ತಮ್ಮ ಜಮೀನಿನಲ್ಲಿ ವಿವಿಧ ಅರಣ್ಯ, ತೋಟಗಾರಿಕೆ, ರೇಷ್ಮೆ ಬೆಳೆ ಬೆಳೆಯ ಬಹುದು. ಇಲ್ಲವೇ ಸಮುದಾಯ ಕಾಮಗಾರಿಯಲ್ಲಿ ಪಾಲ್ಗೊಂಡು ದಿನಕ್ಕೆ 370 ರೂ. ಕೂಲಿ ಪಡೆಯಬಹುದಾಗಿದೆ.
ಗದಗ ತಾಲೂಕು ಪಂಚಾಯತಿ ವ್ಯಾಪ್ತಿಯ ಅಡವಿಸೋಮಾಪುರ, ಬಿಂಕದಕಟ್ಟಿ, ಕುರ್ತಕೋಟಿ, ಲಕ್ಕುಂಡಿ, ಬೆಳಹೋಡ, ಅಂತೂರ, ಬಳಗಾನೂರ, ಹರ್ಲಾಪೂರ, ತಿಮ್ಮಾಪುರ, ಹುಯಿಲಗೋಳ, ಹುಲಕೋಟಿ, ಕದಡಿ, ನಾಗಾವಿ, ಬೆಳದಡಿ ಸೇರಿ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸಮುದಾಯ ಬದು ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಿದ್ದು. ನಿತ್ಯ 10,000 ಕ್ಕೂ ಹೆಚ್ಚು ಜನರು ಕೆಲಸದಲ್ಲಿ ತೊಡಗಿದ್ದಾರೆ.
ಎರಡು ಬಾರಿ ಹಾಜರಾತಿ ಕಡ್ಡಾಯ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಕೆಲಸಕ್ಕೆ ಬರುವ ಕೂಲಿಕಾರರ ಹಾಜರಾತಿ ಪಡೆಯಲು ಕೇಂದ್ರ ಸರ್ಕಾರ ಎನ್‌ಎಂಎAಎಸ್ (ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸರ್ವಿಸ್) ತಂತ್ರಾAಶ ಅಭಿವೃದ್ಧಿ ಪಡಿಸಿದೆ. ದಿನಕ್ಕೆ ಎರಡು ಬಾರಿ ಹಾಜರಾತಿ ಹಾಕುವುದು ಕಡ್ಡಾಯವಿದೆ. ಹೆಡ್ ಕೌಂಟ್ (ತಲೆ ಲೆಕ್ಕ) ಮೂಲಕ ಹಾಜರಾತಿಯನ್ನು ಇಂದೀಕರಿಸಿ ತಂತ್ರಾAಶದಲ್ಲಿ ದಾಖಲಿಸಲಾಗುತ್ತದೆ.
ಸಮಾನ ಕೂಲಿ: ಎನ್‌ಆರ್‌ಇಜಿಎ ಯೋಜನೆಯಡಿ ಮಹಿಳೆ, ಪುರುಷ ಎಂಬ ಭೇದವಿಲ್ಲದೆ ಎಲ್ಲರಿಗೂ ಕೂಲಿ ಹಣ ನೀಡಲಾಗುತ್ತದೆ. 349 ರೂ. ಇದ್ದ ಕೂಲಿ ದರವನ್ನು ಏಪ್ರಿಲ್ 1ರಿಂದ 370 ರೂ.ಗೆ ಹೆಚ್ಚಿಸಲಾಗಿದೆ. ಸರಿಯಾದ ಅಳತೆಯಲ್ಲಿ ಕಂದಕ ಬದು ನಿರ್ಮಾಣ ಮಾಡದಾಗ ಮಾತ್ರ ಪೂರ್ಣ ಪ್ರಮಾಣದ ಕೂಲಿ ಹಣ ದೊರೆಯಲಿದೆ. ತಾಲೂಕಿನ ಗ್ರಾಮೀಣ ಜನರು ಬೇಸಿಗೆಯ ಕನಿಷ್ಠ 50 ದಿನಗಳ ಕಾಲ ಕೆಲಸ ನಿರ್ವಹಿಸಿದರೆ 18500 ರೂ.ಗಳನ್ನು ನೇರವಾಗಿ ಕೂಲಿಕಾರರ ಉಳಿತಾಯ ಖಾತೆಗೆ ಪಾವತಿಯಾಗಲಿದೆ. ತಮ್ಮದೇ ಕುಟುಂಬ ಸದಸ್ಯರು ಕೂಡಿಕೊಂಡು ಕೆಲಸ ಮಾಡಿ ಹಣ ಪಡೆಯಬಹದಾಗಿದೆ. ಇದರಿಂದ ಕುಟುಂಬದ ಸಣ್ಣ-ಪಟ್ಟು ಅಗತ್ಯತೆ, ಮಕ್ಕಳ ಮುಂದಿನ ವ್ಯಾಸಂಗಕ್ಕೆ, ಬಳಕೆ ಮಾಡಿಕೊಳ್ಳಬಹುದಾಗಿದೆ. ಜೊತೆಗೆ ಮುಂಗಾರು ಬೆಳೆ ಬೆಳೆಯಲು ಗೊಬ್ಬರ, ಬೀಜ ಮತ್ತು ಜಮೀನಿನ ಇನ್ನಿತರ ಕೆಲಸ ಕಾರ್ಯಗಳಿಗೆ ಇದನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ.
ಮಣ್ಣು ನೀರು ಸಂರಕ್ಷಣೆ: ರೈತರು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ ಮಾಡಿಕೊಳ್ಳುವುದರಿಂದ ಅಂತರ್ಜಲ ಪ್ರಮಾಣ ಹೆಚ್ಚಾಗಲಿದೆ. ಬದು ನಿರ್ಮಾಣದಿಂದ ಜಮೀನಿನಲ್ಲಿಯ ಮಣ್ಣು ಕೊಚ್ಚಿ ಹೋಗದೆ ಗುಂಡಿಗಳಲ್ಲಿಯೇ ಸಂಗ್ರಹವಾಗಲಿದೆ. ಮಳೆಯಾದಾಗ ಹೆಚ್ಚುವರಿ ನೀರು ಹರಿದು ಕೊಚ್ಚಿ ಹೋಗದಂತೆ ಬದುವಿನಲ್ಲಿ ಮಣ್ಣಿನ ಏರಿ ಹಾಕುವುದರಿಂದ ಫಲವತ್ತಾದ ಮಣ್ಣು ಮತ್ತು ನೀರನ್ನು ತಡೆ ಹಿಡಿದ ಭೂ ಫಲವತ್ತತೆ ಹಾಗೂ ಅಂತರ್ಜಲ ವೃದ್ಧಿಯಾಗಲಿದೆ. ರೈತರು ಇದರಿಂದ ಉತ್ತಮ ಇಳುವರಿಯನ್ನು ಪಡೆಯ ಬಹುದಾಗಿದೆ. 10 ಅಡಿ ಉದ್ದ, 5 ಅಡಿ ಅಗಲ, 2 ಅಡಿ ಆಳದ ಕಂದಕಕ್ಕೆ ಅವಕಾಶವಿದೆ. ಪ್ರತಿ ಕಂದಕವೂ ಅಂದಾಜು 2700 ಲೀಟರ್ ನೀರು ಹಿಡಿದಿಡುವ ಸಾಮರ್ಥ್ಯ ಹೊಂದಿರುತ್ತವೆ.
ತಾಲೂಕಿನ ಗ್ರಾಮೀಣ ಜನರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ನೀಡಲು ಮನರೇಗಾ ಯೋಜನೆಯಡಿ ಕೆಲಸ ನೀಡಲು ಸಮುದಾಯ ಬದು ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಇದರಿಂದ ಗ್ರಾಮೀಣರು ಉದ್ಯೋಗ ಅರಿಸಿ ವಲಸೆ ಹೋಗುವುದನ್ನು ನಿಲ್ಲಿಸಿ ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಖಾತ್ರಿಯಲ್ಲಿ ಕೆಲಸ ಪಡೆಯಬಹುದಾಗಿದೆ.
ಕೋಟ್…
ಆ ಜಮೀನಿನಲ್ಲಿ ಬದು ನಿರ್ಮಾಣ ಮಾಡಿಕೊಳ್ಳುವುದರಿಂದ ಮಳೆಗಾಲದಲ್ಲಿ ಆಗುವ ಅನುಕೂಲಗಳ ಕುರಿತು ರೈತರಿಗೆ ಮಾಹಿತಿ ನೀಡಲಾಗಿದೆ. ಮಣ್ಣು ಮತ್ತು ನೀರು ಸಂರಕ್ಷಣೆಗೆ ಬದು ನಿರ್ಮಾಣ ಉತ್ತಮ ಯೋಜನೆ ಆಗಿದೆ. ಇದರಿಂದ ರೈತರ ಜಮೀನಿನ ಫಲವತ್ತತೆ ಹೆಚ್ಚಳವಾಗುವುದರ ಜೊತೆಗೆ ಸಣ್ಣ- ಅತಿ ಸಣ್ಣ ರೈತರು ದಿನಕ್ಕೆ 370 ರೂ. ಕೂಲಿ ಪಡೆಯ ಬಹುದಾಗಿದೆ. ರೈತರು ತಮ್ಮ ಜಮೀನನಲ್ಲಿ ಬದು ನಿರ್ಮಿಸಿಕೊಳ್ಳಲು ಮುಂದಾಗಬೇಕು.
– ಮಲ್ಲಯ್ಯ ಕೊರವನವರ,
ಕಾರ್ಯನಿರ್ವಾಹ ಅಧಿಕಾರಿಗಳು ತಾಪಂ ಗದಗ
ಕೋಟ್…
ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ಹಾಗೂ ಗ್ರಾಮಗಳಲ್ಲಿ ಬದು ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಎನ್‌ಎಂಎAಎಸ್ ತಂತ್ರಾAಶದ ಮೂಲಕ ಎರಡು ಬಾರಿ ಹಾಜರಾತಿ ಹಾಕುವುದು ಕಡ್ಡಾಯವಾಗಿದೆ. ಅಳತೆಗನುಸಾರ ಕೆಲಸ ಮಾಡಿದಾಗ ಮಾತ್ರ ಪ್ರತಿ ವ್ಯಕ್ತಿಗೆ 370ರೂ. ಸಮಾನವಾಗಿ ಕೂಲಿ ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯ ರೈತರು ಈ ಯೋಜನೆಯ ಲಾಭ ಪಡೆಯಬೇಕು.
– ಕುಮಾರ ಪೂಜಾರ 
ಸಹಾಯಕ ನಿರ್ದೇಶಕರು (ಉಖಾ) ತಾಪಂ ಗದಗ
TAGGED:
Share This Article

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…

ಆನ್​ಲೈನ್-ಆಫ್​ಲೈನ್ ಸಮತೋಲನ ಅಗತ್ಯ

‘ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾದ ಮಕ್ಕಳ ವಿಷಯದಲ್ಲಿ ಪಾಲಕರೂ ಹೆಚ್ಚು ಜವಾಬ್ದಾರಿ ವಹಿಸಬೇಕು’ ಎನ್ನುತ್ತಾರೆ ನಿಮ್ಹಾನ್ಸ್​ನ ಕ್ಲಿನಿಕಲ್…