ಗದಗ: ಮಾಜಿ ಸಿಎಂ ಸಿದ್ದರಾಮಯ್ಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಮತಬೇಟೆಗೆ ಧುಮುಕಿದ್ದಾರೆ. ಪ್ರಚಾರಕ್ಕಾಗಿ ತಾಲೂಕಿನ ಬೆಳ್ಳಟ್ಟಿ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು.
ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು
ವಿಶೇಷ ಹೆಲಿಕಾಪ್ಟರ್ ಮೂಲಕ ತಾಲೂಕಿನ ಆಗಮಿಸಿದ ಸಿದ್ದರಾಮಯ್ಯ ಅವರನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ನೆರದಿದ್ದರು. ಮಾಜಿ ಸಿಎಂ ಹೆಲಿಕಾಪ್ಟರ್ನಿಂದ ಕೆಳಗಿಳಿಯುತ್ತಿದ್ದಂತೆ ಜನರು ಹಾಗೂ ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಸಿಆರ್ಪಿಎಫ್ ಪೊಲೀಸರಿಂದ ಲಾಠಿ ಚಾರ್ಜ್
ಜನರು ಹಾಗೂ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಲಘು ಲಾಠಿ ಪ್ರಹಾರ ನಡೆಸುವ ಮೂಲಕ ಪೊಲೀಸರು ಜನರನ್ನು ಚದುರಿಸಿದ್ದಾರೆ. ಸಿಆರ್ಪಿಎಫ್ ಹಾಗೂ ಸ್ಥಳೀಯ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ.
ಇದನ್ನೂ ಓದಿ: ಪುತ್ತೂರಿಗೆ ಯಾರಾಗುವರು ಮುತ್ತು?: ಸಂಘಪರಿವಾರದ ಭದ್ರ ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಸದ್ದು