More

    ಗ್ರಾಮೀಣ ಭಾಗದಲ್ಲಿ ಗುಳೆ ತಪ್ಪಿಸಲು ನಿಮ್ಮ ಸಹಕಾರ ಬಹಳ ಅವಶ್ಯ : ವಿ. ಎಸ್.ಸಜ್ಜನ

    ರೋಣ : ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ, ಅದನ್ನು ತಪ್ಪಿಸಲು ನಿಮ್ಮೆಲ್ಲರ ಸಹಕಾರ ಬಹಳ ಮುಖ್ಯ ಪ್ರತಿ ಮನೆಗೆ ಹೋಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಏಪ್ರಿಲ್ 1 ರಿಂದ ಸಮುದಾಯ ಕಾಮಗಾರಿ ಪ್ರಾರಂಭವಾಗುತ್ತದೆ  ಎಂಬುದನ್ನು  ಮನವರಿಕೆ ಮಾಡಿ ಗುಳೆ ತಪ್ಪಿಸಿ ಎಂದು ಜಿಲ್ಲಾ ಮಾಹಿತಿ ಶಿಕ್ಷಣ & ಸಂವಹನ ಸಂಯೋಜಕರಾದ ವಿ.ಎಸ್ ಸಜ್ಜನ ಹೇಳಿದರು.

    ರೋಣ ತಾಲೂಕಿನ ಸವಡಿ ಗ್ರಾಮ ಪಂಚಾಯತಿ ಯಲ್ಲಿ “ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ” ಅಭಿಯಾನದಡಿ ಕಾಯಕ ಬಂಧುಗಳ, ಸ್ವಸಹಾಯ ಸಂಘಗಳ ಸದಸ್ಯರ ಕೂಲಿಕಾರರ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಮಾಹಿತಿ ಶಿಕ್ಷಣ & ಸಂವಹನ ಸಂಯೋಜಕರಾದ  ವಿ.ಎಸ್. ಸಜ್ಜನ ರವರು ಎಪ್ರಿಲ್ 1 ರಿಂದ ನಿಮ್ಮ ಗ್ರಾಮದಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಎಲ್ಲಾ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಜಿ.ಪಂ ಸಿಇಓ ಅವರು ತಿಳಿಸಿದ್ದಾರೆ ಹಾಗಾಗಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೆಲಸ ಪ್ರಾರಂಭವಾಗುತ್ತದೆ.

    ಕಾಯಕ ಬಂಧುಗಳಾದ ತಾವೆಲ್ಲರೂ ಕೂಲಿಕಾರರ  ಆರ್ಥಿಕ ಸಬಲತೆಗಾಗಿ ದುಡಿಯಬೇಕು. ಬಂಧು ಅಂದರೆ ಜನರಿಗೆ ಹತ್ತಿರ ಇದ್ದವರು ಅಂತಾ ಅರ್ಥ ಹಾಗಾಗಿ ದುಡಿಯುವ ವರ್ಗಕ್ಕೆ ಹತ್ತಿರ ಇರುವ ತಮಗೆ ಕಾಯಕ ಬಂಧುಗಳು ಎನ್ನಲಾಗುತ್ತದೆ. ಕೆಲಸದ ಸ್ಥಳದಲ್ಲಿ ನೀರು, ನೆರಳು ಸೇರಿದಂತೆ ಮಕ್ಕಳಿಗಾಗಿಯೇ ಗ್ರಾಮದಲ್ಲಿ ಕೂಸಿನ ಮನೆ ಸಹ ತೆರಯಲಾಗಿದ್ದು ಪಾಲಕರು ಮಕ್ಕಳನ್ನು ಅಲ್ಲಿ ಬಿಟ್ಟು ಹೋಗಬೇಕು ಅದನ್ನು ನೀವು ಜನರಿಗೆ ತಿಳಿಸಬೇಕು ಎಂದರು. ಮುಖ್ಯವಾಗಿ ಕೆಲಸಕ್ಕೆ ಬಂದವರಿಗೆ ಅಳತೆ ತಕ್ಕ ಹಾಗೆ ಕಡೆಯುವದು ಕಡ್ಡಾಯ, ಒಬ್ಬರಿಗೆ ಒಂದು ಅಳತೆ ಮತ್ತೊಬ್ಬರಿಗೆ ಒಂದು ಅಳತೆ ಹೀಗೆ ತಾರತಮ್ಯ ಮಾಡದ ಹಾಗೆ ಕೆಲಸ ಮಾಡುವದು ತಮ್ಮ ಕರ್ತವ್ಯ ದಯವಿಟ್ಟು ಪಾಲಿಸಿ ಅಂತಾ ಮನವಿ ಮಾಡಿದರು.

    ಕೊನೆಯಲ್ಲಿ ಕಡ್ಡಾಯವಾಗಿ ಈಬಾರಿ ಗ್ರಾಮ ಪಂಚಾಯತಿ ಯಿಂದ ನೊಂದಾಯಿಸಲ್ಪಟ್ಟ ಕುಟುಂಬ ಗಳಲ್ಲಿ  ನರೇಗಾ ಯೋಜನೆಯಡಿ ಸಕ್ರಿಯವಲ್ಲದ ಇರುವವರನ್ನು ಗುರುತಿಸಿ ಸದರಿಯವರನ್ನು ಪಾಲ್ಗೊಳ್ಳುವಂತೆ ಮಾಡಲು ಮನೆ ಮನೆಗೆ ತೆರಳಿ ಯೋಜನೆಯಡಿ ದೊರೆಯುವ  ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

    ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಶ್ರೀಂಗೇರಿ, ತಾಲೂಕ ಮಾಹಿತಿ ಶಿಕ್ಷಣ & ಸಂವಹನ ಸಂಯೋಜಕ ಮಂಜುನಾಥ , ಬಿ ಎಫ್ ಟಿ ಈರಣ್ಣ ಬೆಲೇರಿ, ಜಿಕೆಎಮ್ ಚಾಂದಬಿ ಕರ್ನಾಚಿ ಗ್ರಾಮ ಪಂಚಾಯಿತಿ ಸದಸ್ಯರು, ಕಾಯಕ ಬಂಧುಗಳು , ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts