ಗಳಗನಾಥರು, ರಾಜಪುರೋಹಿತರ ಸೇವೆ ಸ್ಮರಣೀಯ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ಯಾರು ಸಾಹಿತ್ಯ ಓದುತ್ತಾರೆ ಅದು ಅವರ ಹಿತ ಕಾಪಾಡುತ್ತದೆ. ಇದಕ್ಕಾಗಿ ಕೆಲವರು ಇಡೀ ಜೀವನ ಮುಡಿಪಾಗಿಟ್ಟವರಿದ್ದಾರೆ. ಅಂತಹವರಲ್ಲಿ ಗಳಗನಾಥರು ಮತ್ತು ನಾ.ಶ್ರೀ. ರಾಜಪುರೋಹಿತರು ಮೊದಲಿಗರು ಎಂದು ಹಿರಿಯ ಪ್ರಕಾಶಕ ರಮಾಕಾಂತ ಜೋಶಿ ಹೆಳಿದರು.
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಳಗನಾಥ ಹಾಗೂ ನಾ.ಶ್ರೀ ರಾಜಪುರೋಹಿತ ಸ್ಮರಣಾರ್ಥ ದತ್ತಿ ನಿಮಿತ್ತ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗಳಗನಾಥರು ಕಾದಂಬರಿಕಾರರಾಗಿ, ನಾ.ಶ್ರೀ. ರಾಜಪುರೋಹಿತರು ಇತಿಹಾಸ ಸಂಶೋಧಕರಾಗಿ ಕನ್ನಡಕ್ಕೆ ಅರ್ಹನಿಶಿ ದುಡಿದರು. ಇವರಿಬ್ಬರು ಕನ್ನಡ ಉದ್ಧರಿಸಿದ ಮಹಾನುಭಾವರು. ಮುಂದಿನ ಜನಾಂಗದ ಯುವಕರಿಗೆ ಕನ್ನಡದ ಬಗ್ಗೆ ಅಭಿಮಾನ ಬೆಳೆಯುವಂತೆ ಮಾಡುವುದು ಆದ್ಯ ಕರ್ತವ್ಯವಾಗಬೇಕು ಎಂದರು.
ಸುಧೀಂದ್ರ ಕುಲಕರ್ಣಿ ಮಾತನಾಡಿದರು. ಗಳಗನಾಥರ ಬದುಕು-ಬರಹ ಕುರಿತು ಹರ್ಷ ಡಂಬಳ, ನಾ. ಶ್ರೀ. ರಾಜಪುರರೋಹಿತ ಕುರಿತು ಡಾ. ಗುರುಪಾದ ಮರಿಗುದ್ದಿ ಮಾತನಾಡಿದರು. ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಶಂಕರ ಹಲಗತ್ತಿ, ಬಸವಪ್ರಭು ಹೊಸಕೇರಿ, ಶ್ರೀನಿವಾಸ ವಾಡಪ್ಪಿ, ಗಿರೀಶ ಪದಕಿ, ಇತರರು ಇದ್ದರು. ವೀರಣ್ಣ ಒಡ್ಡೀನ ಸ್ವಾಗತಿಸಿದರು. ಪ್ರೊ. ದುಷ್ಯಂತ ನಾಡಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಮಹೇಶ ಹೊರಕೇರಿ ನಿರೂಪಿಸಿದರು. ಡಾ. ಸಂಜೀವ ಕುಲಕರ್ಣಿ ವಂದಿಸಿದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…