More

    ವೈಭವದ ಹುಟ್ಟುಹಬ್ಬ ಬೇಡ … ಅಭಿಮಾನಿಗಳಿಗೆ ಗಣೇಶ್​ ಮನವಿ

    ಗೋಲ್ಡನ್​ ಸ್ಟಾರ್ ಗಣೇಶ್​ ಇದೇ ಜುಲೈ 02ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಪ್ರತಿವರ್ಷ, ರಾಜರಾಜೇಶ್ವರಿ ನಗರದ ಅವರ ಮನೆಯ ಮುಂದೆ ಸಂಭ್ರಮವೋ ಸಂಭ್ರಮವಿರುತ್ತದೆ. ಆದರೆ, ಈ ಬಾರಿ ಆ ಸಂಭ್ರಮಕ್ಕೆ ಫುಲ್​ಸ್ಟಾಪ್​ ಹಾಕುವುದಕ್ಕೆ ಗಣೇಶ್​ ತೀರ್ಮಾನಿಸಿದ್ದಾರೆ. ಕರೊನಾದಿಂದ ಜನ ತತ್ತರಿಸುತ್ತಿರುವುದರಿಂದ, ಈ ಸಂದರ್ಭದಲ್ಲಿ ವೈಭವದ ಹುಟ್ಟುಹಬ್ಬವನ್ನು ಬಿಟ್ಟು, ಅಗತ್ಯವಿರುವವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

    ಇದನ್ನೂ ಓದಿ: ಬಿಡುಗಡೆಯಾಯ್ತು 10 ಚಿತ್ರದ ಟೀಸರ್​ … ವಿನಯ್​ ನೋಡಿ ಕಲೀಬೇಕು ಅಂತಿದ್ದಾರೆ ಜನ

    ಈ ಸಂಬಂಧ ಅಭಿಮಾನಿಗಳಿಗೆ ಒಂದು ಪತ್ರ ಬರೆದು, ಅದನ್ನು ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಪತ್ರದಲ್ಲಿ ಅವರು, ಈ ಹುಟ್ಟುಹಬ್ಬಕ್ಕೆ ಶುಭಕೋರುವುದಕ್ಕೆ ನಿವಾಸಕ್ಕೆ ಬರುವುದು ಬೇಡ ಎಂದು ಸ್ಪಷ್ಟಪಡಿಸುವುದರ ಜತೆಗೆ, ಎಲ್ಲಿದ್ದೀರೋ ಅಲ್ಲಿಂದಲೇ ಶುಭಕೋರಿ ಆಶೀರ್ವದಿಸಿ ಎಂದು ಹೇಳಿದ್ದಾರೆ. ಈ ಪತ್ರದಲ್ಲಿ ಗಣೇಶ್​ ಇನ್ನೂ ಏನೇನು ಹೇಳಿದ್ದಾರೆ ಎಂಬ ಕುತುಹಲವಿದ್ದರೆ, ಮುಂದೆ ಓದಿ …

    ಈ ಕರೊನಾದ ಸಂಕಷ್ಟ ಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕುಗಳಲ್ಲೂ ನೀವು ನೊಂದವರ, ಅಸಹಾಯಕರ, ಹಸಿದವರ ಬೆಂಬಲಕ್ಕೆ ನಿಂತಿರಿ, ಇದಕ್ಕೆ ಯಾವ ಪ್ರಚಾರವನ್ನೂ ಬಯಸದೆ ಸದ್ದುಗದ್ದಲವಿಲ್ಲದೆ ನಿಮ್ಮ ಮಾನವೀಯತೆಯನ್ನು ತೋರಿಸಿದಿರಿ. ಇದಕ್ಕಾಗಿ ನಾನು ನಿಮಗೆ ಆಭಾರಿಯಾಗಿದ್ದೇನೆ.ನಿಮ್ಮ ಕಾರ್ಯಗಳಿಗಾಗಿ ಹೆಮ್ಮೆ ಪಡುತ್ತೇನೆ.

    ನಿಮಗೆಲ್ಲಾ ಗೊತ್ತಿರುವ ಹಾಗೆ ಜುಲೈ 2ರಂದು ಪ್ರತೀವರ್ಷ ಸಾವಿರಾರು ಮಂದಿ ಬೆಂಗಳೂರಿಗೆ ಬಂದು ನನ್ನ ಜನ್ಮದಿನವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಿದ್ದೀರಿ. ಇದಕ್ಕೆ ನಾನು ಸದಾ ಚಿರಋಣಿ. ಆದರೆ, ಈ ವರ್ಷ ಎಂದಿನಂತಿಲ್ಲ. ಕರೊನಾದಿಂದಾಗಿ ನಮ್ಮ ಬದುಕಿನ ಶೈಲಿಯೇ ಬದಲಾಗಿದೆ. ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗಿದ್ದಾರೆ. ಬಡಜನರು ದೈನಂದಿನ ಬದುಕನ್ನು ಸಾಗಿಸುವುದೇ ಕಷ್ಟ ಸಾಧ್ಯವಾಗಿದೆ. ನನ್ನ ನಾಡಿನ ಜನರು ಹೀಗೆ ಸಂಕಷ್ಟದಲ್ಲಿ ಇರುವಾಗ ವೈಭವದ ಹುಟ್ಟುಹಬ್ಬದ ಆಚರಣೆ ಯಾವುದೇ ಕಾರಣಕ್ಕೂ ಬೇಡವೆಂದು ನಿರ್ಧರಿಸಿದ್ದೇನೆ.

    ಹೊರಜಿಲ್ಲೆಗಳಿಂದ ನನ್ನ ಅಭಿಮಾನಿಗಳು ಈ ಸಮಯದಲ್ಲಿ ಬೆಂಗಳೂರಿಗೆ ಬರುವುದು ಬೇಡ. ನೀವು ನನಗಾಗಿ ಖರ್ಚು ಮಾಡುವ ಹಣವನ್ನು ಅದೇ ದಿನ ಬಡಕುಟುಂಬಗಳಿಗೆ ಸಹಾಯಹಸ್ತ ನೀಡಿ. ಅದೇ ಅರ್ಥಪೂರ್ಣ ಆಚರಣೆಯಾಗುತ್ತದೆ. ನನಗೆ ಶುಭಕೋರಲು ನನ್ನ ನಿವಾಸಕ್ಕೆ ಬರುವುದು ಬೇಡ. ನೀವೆಲ್ಲಿದ್ದೀರೋ ಅಲ್ಲಿಂದಲೇ ನನಗೆ ಶುಭಕೋರಿ ಆಶೀರ್ವದಿಸಿ.

    ನಾಳೆ ಬಿಡುಗಡೆಯಾಗ್ತಿದೆಯಾ ಲಾ? ಸುದ್ದಿಯೂ ಇಲ್ಲ … ಪ್ರಚಾರ ಇಲ್ಲವೆ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts