ಸಮತೋಲನ ಜಲಾಶಯಕ್ಕಾಗಿ ಹೆಚ್ಚಿನ ಹಣ ಮೀಸಲಿಗೆ ಪ್ರಸ್ತಾವನೆ: ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಹೇಳಿಕೆ

blank

ಗಂಗಾವತಿ: ತಾಲೂಕಿನ ನವಲಿ ಬಳಿ ಸಮತೋಲನ ಜಲಾಶಯಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಹೇಳಿದರು.

blank

ತಾಲೂಕಿನ ಕೇಸಕ್ಕಿ ಹಂಚಿನಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬೋಂಗಾ ದುರಸ್ತಿ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಮಾನಾಂತರ ಜಲಾಶಯದ ಕೊರತೆಯಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು, ನವಲಿ ಬಳಿ ನಿರ್ಮಾಣಕ್ಕಾಗಿ ಡಿಪಿಆರ್ ಸಿದ್ಧಪಡಿಸಲಾಗಿದೆ. ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಸಮಾನಾಂತರ ಕಾಲುವೆ ನಿರ್ಮಾಣದ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ನವಲಿ ಜಲಾಶಯದ ನಂತರ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದರು.

ಅಧಿಕಾರಿಗಳ ಮತುವರ್ಜಿಯಿಂದ ಬೋಂಗಾ ದುರಸ್ತಿ ಕಾಮಗಾರಿ ತ್ವರಿತವಾಗಿ ನಡೆಯುತ್ತಿದ್ದು, 24 ಗಂಟೆಯೊಳಗೆ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಶಿವಪುರ ಮತ್ತು ಸಣಾಪುರ ಜಲಾಶಯದಲ್ಲಿ ನೀರು ಹಿಡಿದಿಟ್ಟುಕೊಂಡು ಹಂತಹಂತವಾಗಿ ಕಾಲುವೆಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.

ಕಾಡಾ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ ಮಾತನಾಡಿ, ಸೋರಿಕೆ ಕಂಡು ಬಂದ ಜಾಗದಲ್ಲಿ ಗ್ರೋವೆಟಿಂಗ್, ಹೊರಭಾಗದಲ್ಲಿ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ರೈತರಿಗೆ ತೊಂದರೆಯಾಗದಂತೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ನುರಿತ ಅಧಿಕಾರಿಗಳು ಮತ್ತು ವಿನ್ಯಾಸಕರ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಖಾದಿ ಗ್ರಾಮದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಹರವಿ ಶಂಕರಗೌಡ, ಜಲಸಂಪನ್ಮೂಲ ಇಲಾಖೆ ಪ್ರಭಾರ ಇಇ ಸತ್ಯಪ್ಪ, ಎಇಇಗಳಾದ ಸೂಗಪ್ಪ, ಈ.ಕೃಷ್ಣಪ್ಪ, ವಿನ್ಯಾಸಕಾರ ಬಸಪ್ಪ ಜಾನೇಕರ್ ಇತರರಿದ್ದರು.

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank