ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅಂಗನವಾಡಿ ಪೂರಕ

Anganwadi building inauguration
blank

ಗಂಗಾವತಿ: ತಾಲೂಕಿನ ಮರಳಿ ಗ್ರಾಪಂ ವ್ಯಾಪ್ತಿಯ ಪ್ರಗತಿನಗರದ 4ನೇ ವಾರ್ಡ್‌ನಲ್ಲಿ ಹೊಸದಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಹುಸೇನಮ್ಮ ಮಾತನಾಡಿ, ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಅಂಗನವಾಡಿ ಕೇಂದ್ರ ಪೂರಕವಾಗಿದ್ದು, ಮಕ್ಕಳನ್ನು ಮುತುವರ್ಜಿಯಿಂದ ಸಲಹುವ ಜವಾಬ್ದಾರಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಮೇಲಿದೆ. ಪೂರ್ವ ಪ್ರಾಥಮಿಕ ಶಿಕ್ಷಣಕ್ಕಾಗಿ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸುವಂತೆ ಪಾಲಕರಿಗೆ ಮನವಿ ಮಾಡಿದರು.

ಪಿಡಿಒ ಬಸವರಾಜಗೌಡ ಮಾತನಾಡಿ, ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಲಭ್ಯ ಒದಗಿಸಲಾಗುತ್ತಿದ್ದು, ಕಲಿಕೆ ಪೂರಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಗ್ರಾಪಂ ಸದಸ್ಯರಾದ ಕೆ.ರೋಹಿಣಿ ಕೊಟ್ರೇಶ, ನಜೀಯಾ ಮನ್ಸೂರಬೇಗ್, ವಿರೂಪಾಕ್ಷಪ್ಪ ಹೇಮಗುಡ್ಡ, ಶಿವಲಿಂಗಪ್ಪ, ಹೆಬ್ಬಾಳ ನಾಗರಾಜ, ತಾಪಂ ಮಾಜಿ ಅಧ್ಯಕ್ಷ ಮಹ್ಮದ್ ರಫಿ, ಮುಖಂಡರಾದ ಹನುಮಂತರಾಯ, ಗುಂಡಯ್ಯಸ್ವಾಮಿ ಹಿರೇಮಠ, ಮಹಾದೇವಪ್ಪ, ಅಯ್ಯಪ್ಪ, ನಾಗಭೂಷಣ ಸ್ವಾಮಿ, ಜ್ಞಾನೇಶ್ವರಸ್ವಾಮಿ, ರಾಜಾಸಾಬ, ಮಹಾಂತಪ್ಪ, ಶಿವನಪ್ಪ, ಎಂ.ಬಸಪ್ಪ, ಬಾಷಾ, ಶಿವಕುಮಾರ್ ಸ್ವಾಮಿ, ಆಸ್ೀ, ಎಸ್.ಬಸವರಾಜ್, ಎಸ್.ಅಮರೇಶ, ಮೇಲ್ವಿಚಾರಕಿ ಚಂದ್ರಕಲಾ, ಕಾರ್ಯಕರ್ತೆಯರಾದ ಜಯಮ್ಮ, ನಾಗರತ್ನಾ, ದುರಗಮ್ಮ, ನಾಗಮ್ಮ ಇತರರಿದ್ದರು.

Share This Article

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…

ದೇಹದಲ್ಲಿ ಈ ವಿಚಿತ್ರ ಸೂಚನೆಗಳು ಕಾಣಿಸಿದ್ರೆ ಸಕ್ಕರೆ ಕಾಯಿಲೆ ಇದೆ ಎಂದರ್ಥ! | Diabetes

Diabetes: ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ, ಸರಿಯಾದ ಆಹಾರ ಪದ್ಧತಿ ಇಲ್ಲದಿರುವುದು, ವ್ಯಾಯಾಮದ ಕೊರತೆ ಇತ್ಯಾದಿಗಳಿಂದಾಗಿ, ಚಿಕ್ಕ…