blank

ವಿವೇಕಾನಂದರ ಸಂದೇಶಗಳು ಜಗತ್ತಿಗೆ ಮಾದರಿ

Swami Vivekananda Jayanti

ಗಂಗಾವತಿ: ಯುವ ಸಮುದಾಯಕ್ಕೆ ಎಚ್ಚರಿಕೆ ಸಂದೇಶ ನೀಡಿದ ಸ್ವಾಮಿ ವಿವೇಕಾನಂದರ ತತ್ವ ಸಂದೇಶಗಳು ಜಗತ್ತಿಗೆ ಮಾದರಿಯಾಗಿದ್ದು, ವಿದೇಶದಲ್ಲೂ ಸ್ಫೂರ್ತಿ ತುಂಬಿದ್ದರು ಎಂದು ರೋಟರಿ ಕ್ಲಬ್ ತಾಲೂಕಾಧ್ಯಕ್ಷ ಟಿ. ಆಂಜನೇಯ ಹೇಳಿದರು.

ನಗರದ ರೋಟರಿ ಕ್ಲಬ್ ಕಚೇರಿಯಲ್ಲಿ ತಾಲೂಕು ಘಟಕದಿಂದ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವ ನಿಮಿತ್ತ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮಾತನಾಡಿದರು. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ, ಎಂಬುದು ಸರ್ವ ಕಾಲಕ್ಕೂ ನೆನೆಯುವ, ಯುವಕರನ್ನು ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರಿಸುವ ವಾಕ್ಯವಾಗಿದೆ ಎಂದರು.

ಯುವ ಸೇವಾ ವಿಭಾಗದ ನಿರ್ದೇಶಕ ಎಚ್.ಎಂ. ಮಂಜುನಾಥ ಮಾತನಾಡಿದರು. ಸಿಎ ಪರೀಕ್ಷೆಯಲ್ಲಿ ಪಾಸಾದ ಅಕ್ಷಯ ಕುಮಾರ್ ಆರಾಳ್, ವಿವೇಕ್ ಯಾವಗಲ್‌ರನ್ನು ಸಂಸ್ಥೆಯಿಂದ ಸನ್ಮಾನಿಸಲಾಯಿತು.

ನಗರಸಭೆ ಮಾಜಿ ಸದಸ್ಯೆ ಪದ್ಮಾವತಿ ಆಂಜನೇಯ ನಾಯಕ, ರೋಟರಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅಜಿತ್ ರಾಜ್ ಸುರಾನ, ಪದಾಧಿಕಾರಿಗಳಾದ ವಿಜಯಕುಮಾರ್ ಗಡ್ಡಿ, ಎನ್.ಆರ್. ಶ್ರೀನಿವಾಸ್, ವೀರೇಶ ಯಾವಗಲ್, ಆರಾಳ ಶರಣಪ್ಪ, ಎಂ.ಗುರುರಾಜ, ಜಯಶ್ರೀ, ಜೆ. ನಾಗರಾಜ್, ಸುರೇಶ್ ಬಂಬ್, ಶ್ರೀಧರ ನಾಯಕ, ಎಂ. ರಾಘವೇಂದ್ರ ರಾವ್, ನಾಗೇಶ್ವರರಾವ್ ಇತರರಿದ್ದರು.

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…