ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಬೆಂಬಲ

Clean Tungabhadra Campaign

ಗಂಗಾವತಿ: ರಾಷ್ಟ್ರೀಯ ಸ್ವಾಭಿಮಾನ ಅಂದೋಲನದಿಂದ ಹಮ್ಮಿಕೊಂಡಿರುವ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಬೆಂಬಲ ನೀಡಲಾಗುವುದು ಎಂದು ಸೌಹಾರ್ದ ಸಹಕಾರಿ ಸಂಘಗಳ ಬಳಗ ತಾಲೂಕು ಘಟಕದ ಅಧ್ಯಕ್ಷ ಸುಧಾಕರ ಕಲ್ಮನಿ ಹೇಳಿದರು.

ನಗರದ ಗಾಲಿಶ್ರೀ ಸಹಕಾರಿ ಸಂಘದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ಹೊಸಪೇಟೆ ಜಿಲ್ಲೆಯ ಜೀವನಾಡಿ ತುಂಗಭದ್ರಾ ನದಿ ಕಲುಷಿಗೊಳ್ಳುತ್ತಿದೆ. ಗಂಗಾ ಸ್ನಾನ, ತುಂಗಾ ಪಾನ ಎಂಬ ನಾಡ್ನುಡಿ ಸುಳ್ಳಾಗುತ್ತಿದೆ. ಕಾರ್ಖಾನೆ ತ್ಯಾಜ್ಯ ನದಿಗೆ ಸೇರುತ್ತಿದ್ದು, ಕುಡಿಯಲು ಮತ್ತು ಕೃಷಿ ಚಟುವಟಿಕೆಗಳಿಗೂ ಬಳಸಲು ಯೋಗ್ಯವಲ್ಲ. ನಿರ್ಮಲ ತುಂಗಭದ್ರಾ ಅಭಿಯಾನ ಸಮಯೋಚಿತವಾಗಿದ್ದು, ಸಂಘದಿಂದ ಬೆಂಬಲಿಸಲಾಗುವುದು. ರಥಯಾತ್ರೆ, ಪಾದಯಾತ್ರೆ ಮತ್ತು ಸಮಾರೋಪದಲ್ಲಿ ಸಂಘದ ಸದಸ್ಯರು ಜಲಸಂಕಲ್ಪದೊಂದಿಗೆ ಭಾಗವಹಿಸಲಿದ್ದಾರೆ ಎಂದರು.

ಪದಾಧಿಕಾರಿಗಳಾದ ಎಂ.ಶಾಂತಮೂರ್ತಿ, ಕಲ್ಯಾಣ ಬಸವ ಷಣ್ಮುಖಪ್ಪ ಕುರಗೋಡು, ಸತೀಶ, ಶಾಂತಯ್ಯ ಹಿರೇಮಠ, ಮೌನೇಶ, ವಸಂತ್ ಹಾದಿಮನಿ, ಎಂ.ನರಸಿಂಹ ಕುಲ್ಕರ್ಣಿ, ಕೆ.ಮಲ್ಲಿಕಾರ್ಜುನ, ಲಿಂಗರಾಜ, ಸಂತೋಷ ಲಂಕೆ, ರಾಘವೇಂದ್ರ, ಮಹಾಬಳೇಶ ಪಟ್ಟಣಶೆಟ್ಟಿ ಇತರರಿದ್ದರು.

Share This Article

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…

ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips

ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…