ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಬೆಂಬಲ

blank

ಗಂಗಾವತಿ: ರಾಷ್ಟ್ರೀಯ ಸ್ವಾಭಿಮಾನ ಅಂದೋಲನದಿಂದ ಹಮ್ಮಿಕೊಂಡಿರುವ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಬೆಂಬಲ ನೀಡಲಾಗುವುದು ಎಂದು ಸೌಹಾರ್ದ ಸಹಕಾರಿ ಸಂಘಗಳ ಬಳಗ ತಾಲೂಕು ಘಟಕದ ಅಧ್ಯಕ್ಷ ಸುಧಾಕರ ಕಲ್ಮನಿ ಹೇಳಿದರು.

ನಗರದ ಗಾಲಿಶ್ರೀ ಸಹಕಾರಿ ಸಂಘದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ಹೊಸಪೇಟೆ ಜಿಲ್ಲೆಯ ಜೀವನಾಡಿ ತುಂಗಭದ್ರಾ ನದಿ ಕಲುಷಿಗೊಳ್ಳುತ್ತಿದೆ. ಗಂಗಾ ಸ್ನಾನ, ತುಂಗಾ ಪಾನ ಎಂಬ ನಾಡ್ನುಡಿ ಸುಳ್ಳಾಗುತ್ತಿದೆ. ಕಾರ್ಖಾನೆ ತ್ಯಾಜ್ಯ ನದಿಗೆ ಸೇರುತ್ತಿದ್ದು, ಕುಡಿಯಲು ಮತ್ತು ಕೃಷಿ ಚಟುವಟಿಕೆಗಳಿಗೂ ಬಳಸಲು ಯೋಗ್ಯವಲ್ಲ. ನಿರ್ಮಲ ತುಂಗಭದ್ರಾ ಅಭಿಯಾನ ಸಮಯೋಚಿತವಾಗಿದ್ದು, ಸಂಘದಿಂದ ಬೆಂಬಲಿಸಲಾಗುವುದು. ರಥಯಾತ್ರೆ, ಪಾದಯಾತ್ರೆ ಮತ್ತು ಸಮಾರೋಪದಲ್ಲಿ ಸಂಘದ ಸದಸ್ಯರು ಜಲಸಂಕಲ್ಪದೊಂದಿಗೆ ಭಾಗವಹಿಸಲಿದ್ದಾರೆ ಎಂದರು.

ಪದಾಧಿಕಾರಿಗಳಾದ ಎಂ.ಶಾಂತಮೂರ್ತಿ, ಕಲ್ಯಾಣ ಬಸವ ಷಣ್ಮುಖಪ್ಪ ಕುರಗೋಡು, ಸತೀಶ, ಶಾಂತಯ್ಯ ಹಿರೇಮಠ, ಮೌನೇಶ, ವಸಂತ್ ಹಾದಿಮನಿ, ಎಂ.ನರಸಿಂಹ ಕುಲ್ಕರ್ಣಿ, ಕೆ.ಮಲ್ಲಿಕಾರ್ಜುನ, ಲಿಂಗರಾಜ, ಸಂತೋಷ ಲಂಕೆ, ರಾಘವೇಂದ್ರ, ಮಹಾಬಳೇಶ ಪಟ್ಟಣಶೆಟ್ಟಿ ಇತರರಿದ್ದರು.

Share This Article

ಬಿದಿರಿನ ಉಪ್ಪಿನ ಬಗ್ಗೆ ನಿಮಗೆ ತಿಳಿದಿದೆಯೇ? ಇದರ ಬೆಲೆ ಮತ್ತು ಪ್ರಯೋಜನಗಳನ್ನು ಕೇಳಿದ್ರೆ ಅಚ್ಚರಿ ಖಚಿತ! Bamboo Salt

Bamboo Salt : ಆರು ಮಸಾಲೆಗಳಲ್ಲಿ ಉಪ್ಪು ಕೂಡ ಒಂದು. ಭಾರತೀಯ ಪಾಕಪದ್ಧತಿಯಲ್ಲಿ ಉಪ್ಪು ಬಹಳ…

ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla

Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್​ಬೆರಿ ಎಂದು ಕರೆಯಲಾಗುತ್ತದೆ. ಇದು…

ಮನೆಯಲ್ಲಿ ಈ 4 ವಸ್ತುಗಳಿದ್ದರೆ ಲಕ್ಷ್ಮಿ ಒಲಿಯುವುದಿಲ್ಲ! ಇದನ್ನು ಗಮನಿಸದೆ ಹೋದ್ರೆ ಕೈಯಲ್ಲಿ 1 ಪೈಸೆಯೂ ಉಳಿಯಲ್ಲ | Vastu Tips

Vastu Tips: ಇಂದು ಯಾರಿಗೆ ತಾನೇ ಧನಲಕ್ಷ್ಮಿ ಬೇಡ? ವಿದ್ಯೆ ಇಲ್ಲದೇ ಹೋದ್ರೂ ಪರವಾಗಿಲ್ಲ ಹಣವೇ…