More

    ಆಟೋರಿಕ್ಷಾಕ್ಕೆ ಕಾರು ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

    ಗಂಗೊಳ್ಳಿ: ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಜಂಕ್ಷನ್‌ನಲ್ಲಿ ಶನಿವಾರ ಮಧ್ಯಾಹ್ನ ನಡೆದ ಕಾರು, ಆಟೋರಿಕ್ಷಾ ನಡುವಿನ ಅಪಘಾತದಲ್ಲಿ ರಿಕ್ಷಾ ಚಾಲಕ ಆನಗೋಡು ನಿವಾಸಿ ಗಣೇಶ್ ಪೂಜಾರಿ (31) ಮತ್ತು ಪ್ರಯಾಣಿಕ ಮೊವಾಡಿ ನಿವಾಸಿ ಪ್ರತಾಪ್ ಕ್ರಾಸ್ತ (32) ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ.
    ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಾಸಿ ಜಂಕ್ಷನ್ ಮೂಲಕ ರಾಷ್ಟ್ರೀಯ ಹೆದ್ದಾರಿ 66ನ್ನು ದಾಟಿ ರಾಮ ಮಂದಿರ ರಸ್ತೆ ಮೂಲಕ ಮೊವಾಡಿಗೆ ಸಾಗಲು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಹೆದ್ದಾರಿಯ ಮತ್ತೊಂದು ಬದಿಗೆ ಹಾರಿ ನಜ್ಜುಗುಜ್ಜಾಗಿದೆ. ಕಾರು ಕೂಡ ಜಖಂಗೊಂಡಿದೆ. ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್. ಮತ್ತು ಸಿಬ್ಬಂದಿ ಹಾಗೂ ಹೈವೇ ಪ್ಯಾಟ್ರೋಲ್ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts