More

    1.50 ಲಕ್ಷ ರೂ. ಮೌಲ್ಯದ ಗಾಂಜಾ ಮಾರಾಟ ಮಂಗಳೂರು ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

    ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಮಂಗಳವಾರ ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಆತನ ಬಳಿಯಿಂದ 1.50 ಲಕ್ಷ ರೂ. ಮೌಲ್ಯದ 6.325 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.


    ನೀರುಮಾರ್ಗ ಕೆಲರಾಯ್ ಚರ್ಚ್ ರೋಡ್ ನಿವಾಸಿ ನಿಶಾಂತ್ ಶೆಟ್ಟಿ(35) ಬಂಧಿತ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರಕ್ಕೆ ರೈಲಿನಲ್ಲಿ ಸಾಗಾಟ ಮಾಡಿ ಅದನ್ನು ಸಣ್ಣ ಪ್ಯಾಕೆಟ್ ಗಳನ್ನಾಗಿಸಿ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾಗ ಬಂಧಿಸಿದ್ದಾರೆ.


    ಆರೋಪಿಯಿಂದ ಗೂಡ್ಸ್ ಟೆಂಪೋ, ಗಾಂಜಾ, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 9,11,500 ರೂ. ಆಗಿರುತ್ತದೆ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


    ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಪ್ರಕರಣ, ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹೀಗೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.


    ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ಬಸವರಾಜಪ್ಪ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts