ಬೆಂಗಳೂರು: ಸುಮಾರು 10 ತಿಂಗಳ ಹಿಂದೆ ಜಿ.ವಿ.ಅಯ್ಯರ್ ಅವರ ಸ್ಟುಡಿಯೋದಲ್ಲಿ ಸೆಟ್ ಹಾಕಿ ‘ಗರಡಿ’ ಚಿತ್ರದ ಚಿತ್ರೀಕರಣ ಮಾಡಿದ್ದರು ಯೋಗರಾಜ್ ಭಟ್. ಈಗ ಅದೇ ಜಾಗದಲ್ಲಿ ಚಿತ್ರೀಕರಣ ಮುಕ್ತಾಯವಾಗಿದ್ದು, ಕುಂಬಳಕಾಯಿ ಒಡೆಯಲಾಗಿದೆ.
ಇದನ್ನೂ ಓದಿ: ಐಎಂಡಿಬಿ 2023ರ ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಕನ್ನಡದಿಂದ ಒಂದೇ ಚಿತ್ರ … ಯಾವುದದು?
ಸುಮಾರು ಎಪ್ಪತ್ತು ದಿನಗಳ ಚಿತ್ರೀಕರಣದ ನಂತರ ಈಗ ‘ಗರಡಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ಮಾತು ಶುರು ಮಾಡುವ ಯೋಗರಾಜ್ ಭಟ್, “ಗರಡಿ’ ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಯಶಸ್ ಸೂರ್ಯ, ಸೋನಾಲ್ ಮೊಂತೆರೊ, ಬಿ.ಸಿ.ಪಾಟೀಲ್, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು’ ಎಂದು ಮಾಹಿತಿ ಕೊಡುತ್ತಾರೆ.
‘ಗರಡಿ’ ಚಿತ್ರದ ಆಡಿಯೋ ಹಕ್ಕುಗಳು ಸರಿಗಮಪ ಸಂಸ್ಥೆಗೆ ಮಾರಾಟವಾಗಿದೆಯಂತೆ. ‘ಡಬ್ಬಿಂಗ್, ರಿಮೇಕ್ ರೈಟ್ಸ್ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ ಇದು. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ’ ಎನ್ನುತ್ತಾರೆ ನಿರ್ಮಾಪಕ ಮತ್ತು ಸಚಿವ ಬಿ.ಸಿ. ಪಾಟೀಲ್.
ನಾಯಕ ಯಶಸ್ ಸೂರ್ಯ ಚಿತ್ರದಲ್ಲಿ ಪೈಲ್ವಾನ್ ಆಗಿ ಕಾಣಿಸಿಕೊಂಡಿದ್ದಾರಂತೆ. ‘ನಾನು ಪೈಲ್ವಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಅನುಭವಿ ಕಲಾವಿದರೊಂದಿಗೆ ನಟಿಸಿರುವ ಖುಷಿಯಿದೆ’ ಎನ್ನುತ್ತಾರೆ ಯಶಸ್ ಸೂರ್ಯ.
ಇದನ್ನೂ ಓದಿ: 100 ಜನ ಅಭಿಮಾನಿಗಳನ್ನು ಮನಾಲಿಗೆ ಕಳಿಸಲಿರುವ ವಿಜಯ್ ದೇವರಕೊಂಡ..!
‘ಗರಡಿ’ ಚಿತ್ರದ ವಿಶೇಷವೆಂದರೆ, ಸಚಿವ ಎಸ್.ಟಿ. ಸೋಮಶೇಖರ್ ಚಿತ್ರದಲ್ಲೊಂದು ಪ್ರಮುಖ ಕಂ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು ನಾಯಕನ ತಂದೆ ಪಾತ್ರದಲ್ಲಿ ನಟಿಸಿದ್ದಾರೆ.
ಅತಿಥಿಯಾಗಿ ಬಂದು ಸಂಕ್ರಾಂತಿ ಸಂಭ್ರಮವನ್ನು ಹೆಚ್ಚಿಸಲಿದ್ದಾರೆ ರಮೇಶ್ ಅರವಿಂದ್