ಕಸದ ರಾಶಿಗೆ ಬೆಂಕಿ, ವ್ಯಾಪಿಸಿದ ಹೊಗೆ

blank

ಮೈಸೂರು: ವಿದ್ಯಾರಣ್ಯಪುರಂನಲ್ಲಿರುವ ಕಸದ ರಾಶಿಗೆ ಬೆಂಕಿ ಬಿದ್ದು, ಸುಮಾರು ಅರ್ಧ ಕಿ.ಮೀ. ತ್ಯಾಜ್ಯ ಹೊತ್ತಿ ಉರಿದಿದೆ.
ಸಿವೇಜ್ ಫಾರಂನ ತ್ಯಾಜ್ಯದ ರಾಶಿಗೆ ಭಾನುವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದೆ. ಸುಮಾರು 5ರಿಂದ 6 ಕಸದ ಗುಡ್ಡೆಗಳು ಬೆಂಕಿಯಿಂದ ಹೊತ್ತಿ ಉರಿದಿವೆ. ಬಿಸಿಲ ಧಗೆಗೆ ಬೆಂಕಿ ಕ್ಷಣ ಮಾತ್ರದಲ್ಲಿ ವ್ಯಾಪಿಸಿ ಸುಮಾರು ಅರ್ಧ ಕಿ.ಮಿ.ನಷ್ಟು ತ್ಯಾಜ್ಯ ಸುಟ್ಟಿದೆ. ತ್ಯಾಜ್ಯ ಸುಟ್ಟಿದ್ದರಿಂದ ಹೊಗೆ ಮುಗಿಲೆತ್ತರ ವ್ಯಾಪಿಸಿದ್ದಲ್ಲದೇ ಕಸದ ದುರ್ವಾಸನೆ ಸುತ್ತ ಮುತ್ತಲ ಪ್ರದೇಶವನ್ನು ವ್ಯಾಪಿಸಿತ್ತು. ಅಗ್ನಿಶಾಮಕದಳದ 40 ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಎರಡು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಕಸದ ರಾಶಿ ಹಾಗೂ ತ್ಯಾಜ್ಯದ ಹೊಗೆಯ ದಟ್ಟವಾಗಿ ಹರಡಿದ್ದರಿಂದ ವಾತಾವರಣದಲ್ಲಿ ಕೆಟ್ಟ ವಾಸನೆಯೂ ಹೆಚ್ಚಾಗಿ ಹರಡಿತ್ತು. ಬಡಾವಣೆಯಲ್ಲಿ ವಾಸಿಸುವ ಜನರು ಕೆಲ ಕಾಲ ಮೂಗು ಹಿಡಿದುಕೊಂಡೇ ಓಡಾಡುತ್ತಿದ್ದ ದೃಶ್ಯಗಳು ಕಂಡು ಬಂದಿತ್ತು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…