ಉದ್ಯಾನ ಅಭಿವೃದ್ಧಿಗಾಗಿ ಅಧಿಕಾರಿಗೆ ಸಸಿ

blank

ದೇವದುರ್ಗ: ಪಟ್ಟಣದಲ್ಲಿ ಉದ್ಯಾನ ಅಭಿವೃದ್ಧಿ ಮಾಡಲು ಒತ್ತಾಯಿಸಿ ಪುರಸಭೆ ಆಡಳಿತಾಧಿಕಾರಿ ಗಂಗಾಧರ್‌ಗೆ ನಾಗರಿಕರ ವೇದಿಕೆ ಸಸಿಗಳನ್ನು ನೀಡುವ ಮೂಲಕ ಸೋಮವಾರ ವಿಭಿನ್ನವಾಗಿ ಮನವಿ ಸಲ್ಲಿಸಿತು.

blank
blank

ಇದನ್ನೂ ಓದಿ: ಬಸವೇಶ್ವರ ಬಡಾವಣೆ ಉದ್ಯಾನ ಅಭಿವೃದ್ಧಿಗೆ ಚಾಲನೆ

ಪುರಸಭೆ ಆಡಳಿತ ಅಸ್ತಿತ್ವಕ್ಕೆ ಬಂದು ಏಳು ದಶಕ ಕಳೆದರೂ ಸುಸಜ್ಜಿತ ಉದ್ಯಾನ ನಿರ್ಮಾಣ ಮಾಡಿಲ್ಲ. ಇದರಿಂದ ಜನರಿಗೆ ವಿಶ್ರಾಂತಿ ಪಡೆಯಲು ಸಮಸ್ಯೆಯಾಗುತ್ತಿದೆ. ಯಾವುದೇ ಸರ್ಕಾರಿ ಜಾಗದಲ್ಲೂ ಉದ್ಯಾನ ಅಭಿವೃದ್ಧಿ ಮಾಡಿಲ್ಲ.

ಪುರಸಭೆ ವ್ಯಾಪ್ತಿಯಲ್ಲಿ 50ಕ್ಕಿಂತ ಹೆಚ್ಚು ಲೇಔಟ್‌ಗಳಿವೆ. ಹೊಸ ಬಡಾವಣೆಗಳು ನಿರ್ಮಾಣವಾಗುತ್ತಿವೆ. ಆದರೆ, ನಾಗರಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಿಲ್ಲ. ಉದ್ಯಾನ ನಿರ್ಮಾಣ ಮಾಡಿಲ್ಲ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಉದ್ಯಾನ ಅಭಿವೃದ್ಧಿ ಮಾಡಿ ಸೌಲಭ್ಯ ಒದಗಿಸಬೇಕು. ಹೊಸ ಬಡಾವಣೆ, ಲೇಔಟ್‌ನಲ್ಲಿ ಉದ್ಯಾನ ಕಡ್ಡಾಯವಾಗಿ ನಿರ್ಮಿಸಿ ಸಸಿಗಳನ್ನು ನೆಡಬೇಕು. ಸರ್ಕಾರಿ ಜಾಗ, ರಸ್ತೆಅಕ್ಕಪಕ್ಕ ಸಸಿನೆಟ್ಟು ಹಸಿರೀಕರಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಪುರಸಭೆ ಕಂದಾಯ ನಿರೀಕ್ಷಕ ಪ್ರಕಾಶ, ಪುರಸಭೆ ನೌಕರ ರಂಗಪ್ಪ, ನಾಗರಿಕರಾದ ಹನುಮಂತಪ್ಪ ಮನ್ನಾಪುರ, ನರಸಣ್ಣಗೌಡ ನಾಯಕ, ರಂಗಪ್ಪ ಬಲಿದವ್ ಕೋತಿಗುಡ್ಡ, ರಾಘವೇಂದ್ರ ನಾಯಕ ಅಂಜಳ, ಹೊನ್ನಯ್ಯ ಗುಂಡಗುರ್ತಿ, ಆಕಾಶ್, ಎಚ್.ಶಿವರಾಜ್ ಇತರರಿದ್ದರು.

Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…