More

    ಕಾಂಗ್ರೆಸ್ ಯಾತ್ರೆ ವೇಳೆ ಕಳಚಿಬಿದ್ದ ಹಾರಗಳು; ಸೇಬು ಬಾಚಿಕೊಳ್ಳಲು ಮುಗಿಬಿದ್ದ ಕಾರ್ಯಕರ್ತರು!

    ಕುಣಿಗಲ್: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಟ್ಟಣದಲ್ಲಿ ಇಂದು ನಡೆದ ಪ್ರಜಾಧ್ವನಿ ಯಾತ್ರೆಯ ವೇಳೆ ಎರಡು ಹಾರಗಳು ತುಂಡಾಗಿ ಬಿದ್ದಿರುವ ಘಟನೆಗಳು ನಡೆದಿವೆ.

    ಡಿ.ಕೆ. ಶಿವಕುಮಾರ್ ಅವರನ್ನು ಕುಣಿಗಲ್ ಪಟ್ಟಣಕ್ಕೆ ಅದ್ದೂರಿ ಬೃಹತ್ ಹಾರಗಳಿಂದ ಸ್ವಾಗತಿಸಲು ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸಜ್ಜಾಗಿದ್ದರು. ಇದಕ್ಕಾಗಿ ಕೊಬ್ಬರಿ ಮತ್ತು ಸೇಬು ಹಣ್ಣುಗಳಿಂದ ಹಾರಗಳನ್ನು ತಯಾರಿಸಲಾಗಿತ್ತು.

    ಇದನ್ನೂ ಓದಿ: ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!

    ಡಿ.ಕೆ. ಶಿವಕುಮಾರ್ ಬರುವ ಮೊದಲೇ ಕುಣಿಗಲ್ ಪಟ್ಟಣದ ಅಂಚೆ ಪಾಳ್ಯದ ಬಳಿ ಅವರ ಸ್ವಾಗತಕ್ಕಾಗಿ ಕಾಯುತ್ತಿದ್ದ ಕೊಬ್ಬರಿ ಹಾರ ಕ್ರೇನ್‌ಗೆ ಹಾಕುವ ವೇಳೆ ತುಂಡಾಗಿ ಬಿತ್ತು. ಪಟ್ಟಣದ ಹುಚ್ಚಮಾಸ್ತಿಗೌಡ ವೃತದಲ್ಲಿ ಸೇಬಿನ ಬೃಹತ್ ಹಾರ ಡಿ.ಕೆ. ಶಿವಕುಮಾರ್ ಸ್ವಾಗತಕ್ಕಾಗಿ ಕಾಯುತ್ತಿತ್ತು. ಕಾಕತಾಳೀಯ ಎಂಬಂತೆ ಆ ಹಾರ ಕೂಡ ತುಂಡಾಗಿ ಬಿದ್ದಿದೆ. ಈ ಸಂದರ್ಭದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಸೇಬು ಹಣ್ಣುಗಳನ್ನು ಬಾಚಿಕೊಂಡಿದ್ದಾರೆ. ಈ ಎರಡು ಹಾರಗಳು ಕಳಚಿ ಬಿದ್ದಿರುವುದು ಕಾಂಗ್ರೆಸ್ ಪಕ್ಷದ ಪಾಲಿಗೆ ಅಪಶಕುನ ಎಂಬ ಚರ್ಚೆ ಈಗ ಸೋಶಿಯಲ್ ಮೀಡಿಯಾದಲ್ಲಿ ಆರಂಭವಾಗಿದೆ.

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts