More

    ಗೆಲುವಿಗಾಗಿ ಗ್ಯಾಸ್ ಸಿಲಿಂಡರ್​ ಮೊರೆಹೋದ ಡಿ.ಕೆ.ಶಿವಕುಮಾರ್​; ಮೋದಿ ತಂತ್ರವನ್ನೇ ಅನುಸರಿಸಿದ ಕೆಪಿಸಿಸಿ!

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲ ಪಕ್ಷಗಳವರೂ ಸಾಧ್ಯವಿರುವ ಎಲ್ಲ ತಂತ್ರಗಳನ್ನು ಮಾಡುತ್ತಿದ್ದು, ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆ ನಿಟ್ಟಿನಲ್ಲಿ ಗ್ಯಾಸ್ ಸಿಲಿಂಡರ್ ಮೊರೆ ಹೋಗಿದ್ದಾರೆ.

    ಚುನಾವಣೆಗೆ ಇನ್ನೇನು ಗಂಟೆಗಳನ್ನು ಲೆಕ್ಕಹಾಕುತ್ತಿರುವ ಈ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಗೆಲುವಿಗಾಗಿ ಗ್ಯಾಸ್ ಸಿಲಿಂಡರ್​​ ಪೂಜೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಗ್ಯಾಸ್ ಸಿಲಿಂಡರ್​ಗೆ ಪೂಜೆ ಮಾಡಿದರು. ಈ ಮೂಲಕ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಂತ್ರವನ್ನೇ ಅನುಸರಿಸಿದ್ದಾರೆ.

    ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

    2014ರ ಚುನಾವಣೆ ಸಮಯದಲ್ಲಿ ಗ್ಯಾಸ್ ಸಿಲಿಂಡರ್​ಗೆ ಕೈ ಮುಗಿದಿದ್ದ ನರೇಂದ್ರ ಮೋದಿ, ಗ್ಯಾಸ್ ಬೆಲೆ ಏರಿಕೆಯನ್ನು ನೆನಪಿಸಿ ಮತವನ್ನು ಯಾಚಿಸಿದ್ದರು. ಇದೇ ತಂತ್ರಗಾರಿಕೆಯನ್ನು ಬಳಸಿಕೊಂಡು ತಿರುಗೇಟು ನೀಡಿರುವ ಡಿ.ಕೆ.ಶಿವಕುಮಾರ್​, ಗ್ಯಾಸ್ ಸಿಲಿಂಡರ್​ಗೆ ಹೂ ಹಾರ ಹಾಕಿ ಪೂಜೆ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್​​ಗೆ ಗಂಧದಕಡ್ಡಿ ಬೆಳಗಿ, ಮಂಗಳಾರತಿ ಮಾಡಿದ ಶಿವಕುಮಾರ್, ಕಾಂಗ್ರೆಸ್ ಕಚೇರಿಯ ಸಿಬ್ಬಂದಿಗೆ ತೀರ್ಥ ನೀಡಿದರು.

    ಸುಮ್ಮನಿರುವ ಇವರಿಗಿದೆ ಚುನಾವಣಾ ಫಲಿತಾಂಶವನ್ನೇ ಬದಲಿಸುವ ಶಕ್ತಿ!; ಇವರ್ಯಾರು?

    ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ!: ನಿರ್ದೇಶಕ ಉಪೇಂದ್ರ ಹೀಗಂದಿದ್ಯಾಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts