ಬಾಳೆಹೊನ್ನೂರು: ಮೆಣಸುಕೊಡಿಗೆಯ ಗೌರಿಕೆರೆ ಕೆರೆ ಚೌಡೇಶ್ವರಿ ಅಮ್ಮನವರ ಕಾರ್ತಿಕ ದೀಪೋತ್ಸವ ಸಂಭ್ರಮದಿಂದ ನಡೆಯಿತು. ದೀಪೋತ್ಸವದ ಅಂಗವಾಗಿ ಚೌಡೇಶ್ವರಿ ದೇವಿ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಕುಂಕುಮಾರ್ಚನೆ, ಪುಷ್ಪಾಲಂಕಾರ, ಫಲ ಸಮರ್ಪಣೆ, ಮಹಾ ಮಂಗಳಾರತಿ ನೆರವೇರಿಸಲಾಯಿತು.
ಭಕ್ತರು ದೇವಾಲಯದ ಸುತ್ತಲೂ ನೂರಾರು ಹಣತೆಗಳನ್ನು ಹಚ್ಚಿ ಭಕ್ತಿ ಸಮರ್ಪಿಸಿದರು. ಆಕರ್ಷಕ ಪಟಾಕಿ ಪ್ರದರ್ಶನ, ಹಲಗೆ ಓಲದ ವಾದ್ಯಗೋಷ್ಠಿ ವಿಶೇಷ ನೆರವೇರಿತು. ದೇವಾಲಯ ಸಮಿತಿ ಪ್ರಮುಖರಾದ ಟಿ.ಎಂ.ಗುರುಮೂರ್ತಿಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ್, ಕಾಫಿ ಬೆಳೆಗಾರ ಎಂ.ಆರ್.ಬಾಲಕೃಷ್ಣ, ಪ್ರಮುಖರಾದ ಗೋಪಾಲ ಆಚಾರ್ಯ, ಸುಬ್ರಮಣ್ಯ ಕುಂಬತ್ತಿ, ಮಂಜೇಶ್ ಕೋಟೇಹಕ್ಲು, ಮಂಜಪ್ಪನಾಯ್ಕ, ಯೋಗೀಶ್ ಆಚಾರ್ಯ, ಪ್ರಸನ್ನ ಆಚಾರ್ಯ, ಶಂಕರ, ಪ್ರವೀಣ ಮತ್ತಿತರರು ಇದ್ದರು.
ಗೌರಿಕೆರೆ ಕೆರೆ ಚೌಡೇಶ್ವರಿ ದೀಪೋತ್ಸವ ಸಂಪನ್ನ
ವೆಜ್ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್ ವಿಧಾನ Recipe
ಸ್ಟ್ರೀಟ್ ಫುಡ್ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…
ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips
ಹೈಹೀಲ್ಸ್ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…
ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್ | Health Tips
ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…