More

    ತಟ್ಟಂಡ ಬೊಮ್ಮಂಜಕೇರಿಗೆ ಗೆಜ್ಜೆತಂಡ್ ಪ್ರಶಸ್ತಿ

    ನಾಪೋಕ್ಲು: ಐರಿ ಮಕ್ಕಳ ಕೂಟ ಮತ್ತು ಐರಿ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಹತ್ತನೇ ವಾರ್ಷಿಕ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ತಟ್ಟಂಡ ಬೊಮ್ಮಂಜಕೇರಿ ತಂಡ ಗೆಜ್ಜೆತಂಡ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

    ಸಮೀಪದ ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ತಟ್ಟಂಡ ತಂಡ ಆಲಚಂಡ ತಂಡವನ್ನು ಮಣಿಸಿ ಎರಡನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ನಾಪೋಕ್ಲುವಿನ ಆಲಚಂಡ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

    ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ತಟ್ಟಂಡ ತಂಡ ಬಲ್ಲಮಾವಟಿಯ ಐರಿ ತಂಡವನ್ನು 12 ರನ್‌ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿತ್ತು. ಮತ್ತೊಂದು ಸೆಮಿ ಫೈನಲ್ ಪಂದ್ಯದಲ್ಲಿ ಆಲಚಂಡ ತಂಡ ಮುಳ್ಳೇರಿರ ತಂಡವನ್ನು 35 ರನ್‌ಗಳಿಂದ ಪರಾಭವಗೊಳಿಸಿ ಫೈನಲ್ ಪ್ರವೇಶಿಸಿತ್ತು.
    ಮಹಿಳೆಯರಿಗಾಗಿ ನಡೆದ ಹಗ್ಗಜಗ್ಗಾಟ ಟೂರ್ನಿಯಲ್ಲಿ ಹುದಿಕೇರಿಯ ಮಂಜನೈನಿರ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಬಬ್ಬಿರ ಬೇಂಗ್ ನಾಡ್ ತಂಡವನ್ನು ಮಣಿಸಿ ಮಂಜನೈನಿರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಬಬ್ಬೀರ ಬೇಂಗ್ ನಾಡ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಸೆಮಿಫೈನಲ್ ಪಂದ್ಯದಲ್ಲಿ ಮಂಜನೈನಿರ ತಂಡ ಹಾಲೇರಿ ಕೇತೂರಿ ತಂಡವನ್ನು ಮಣಿಸಿ ಅಂತಿಮ ಸುತ್ತಿಗೆ ಲಗ್ಗೆ ಇಟ್ಟರೆ, ಮತ್ತೊಂದು ಸೆಮಿ ಫೈನಲ್ ಪಂದ್ಯದಲ್ಲಿ ಬಬ್ಬೀರ ತಂಡ ಐಮಂಡ ತಂಡವನ್ನು ಮಣಿಸಿ ಅಂತಿಮ ಸುತ್ತಿಗೆ ಪ್ರವೇಶಿಸಿತು.

    ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಎಸಿಎಫ್ ಎ.ಎ.ಗೋಪಾಲ, ವಿರಾಜಪೇಟೆ ಶಿರಸ್ತೇದಾರ್ ಅಂಜಪಂಡ ಪ್ರಕಾಶ್, ಉದ್ಯಮಿ ಬೋಳೇರಿರ ದಿನೇಶ್, ಆರ್‌ಎಫ್ ಒಮಾಲೇರ ಚರಣ್, ಐರಿ ಸಮಾಜದ ಉಪಾಧ್ಯಕ್ಷೆ ಬಬ್ಬೀರ ಸರಸ್ವತಿ, ಕಾರ್ಯದರ್ಶಿ ಕಾಮೆಯಂಡ ಗಣೇಶ್, ವಕೀಲ ಐಮಂಡ ನಾಚಪ್ಪ, ನಿವೃತ ಸೈನಿಕ ಮುಲ್ಲೇರಿರ ಸುಬ್ಬಯ್ಯ, ಐನಂಗಡ ಡಾ.ದಿಲನ್ ಮುತ್ತಣ್ಣ,ಐಮಂಡ ರೂಪೇಶ್ ನಾಣಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts