ಜಮ್ಮು-ಕಾಶ್ಮೀರದ ಆರ್ಟಿಕಲ್ 370ನ್ನು ರದ್ದುಗೊಳಿಸಿ ಇಂದಿಗೆ ಒಂದು ವರ್ಷ ಆಗಿರುವ ಬೆನ್ನಲ್ಲೇ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರೂ ಸಹ ಟ್ವೀಟ್ ಮಾಡಿದ್ದು, ಜಮ್ಮುಕಾಶ್ಮೀರದಾದ್ಯಂತ ವಾಟ್ಸ್ಆ್ಯಪ್ ಫೇಸ್ಬುಕ್ಗಳಲ್ಲಿ ಮುರ್ಮು ಅವರ ರಾಜೀನಾಮೆ ಬಗ್ಗೆಯೇ ಸುದ್ದಿ ಹರಿದಾಡುತ್ತಿದೆ. ಅಧಿಕೃತವಾಗಿ ಎಲ್ಲಿಯೂ ಹೊರಬಿದ್ದಿಲ್ಲ. ಆದರೆ ವಾಸ್ತವ ಏನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೆಚ್ಚುತ್ತಿದೆ ಕರೊನಾದಿಂದ ಮುಕ್ತರಾಗಿ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ: ಇಂದು 100 ಸೋಂಕಿತರು ಸಾವು
ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಆಗಸ್ಟ್ 5ರ 2019ರಂದು ರದ್ದುಗೊಳಿಸಿದ ಬಳಿಕ ಆಕ್ಟೋಬರ್ನಲ್ಲಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಂಗಡಿಸಲಾಗಿತ್ತು. ಅಂದಿನ ಗವರ್ನರ್ ಸತ್ಯಪಾಲ್ ಮಲ್ಲಿಕ್ ಅವರು ಮುರ್ಮು ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದರು. ಅಧಿಕಾರಕ್ಕೆ ಏರಿ 9 ತಿಂಗಳಲ್ಲಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಜಿ.ಸಿ.ಮುರ್ಮು ಅವರು ರಾಜೀನಾಮೆ ನೀಡಿರಲು ಕಾರಣ ಅವರು ಭಾರತದ ಮುಂದಿನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ನೇಮಕಗೊಳ್ಳಲಿದ್ದಾರೆ. ಈ ಹಿಂದಿನ ಸಿಎಜಿ ಆಗಿರುವ ರಾಜೀವ್ ಮಹರ್ಷಿ ಅವರು ಕಳೆದ ವಾರ ನಿವೃತ್ತರಾಗಿದ್ದು, ಅವರ ಜಾಗಕ್ಕೆ ಮುರ್ಮು ನೇಮಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. (ಏಜೆನ್ಸೀಸ್)
‘ಪ್ರಧಾನಿ ಮೋದಿಯವರ ಇಚ್ಛಾಶಕ್ತಿ…ಶ್ರೀರಾಮನ ಆಶೀರ್ವಾದವೇ ಮಂದಿರ ನಿರ್ಮಾಣಕ್ಕೆ ಕಾರಣ’