ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ. ಪ್ರತಿನಿತ್ಯ ಸಾಕಷ್ಟು ನಾಯಕರು ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಿರುವುದು ಸಾಮಾನ್ಯವಾಗಿದ್ದು, ಇದೀಗ ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಅವರ ಧರ್ಮಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ.
ಜೆಡಿಎಸ್ ಪಕ್ಷವನ್ನು ತೊರೆದು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ಮತದಾನಕ್ಕೆ ಕರೆಯೋಲೆ ನೀಡಿದ ಗ್ರಾಪಂ : ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ಪ್ರಯತ್ನ
ಬಿಎಸ್ವೈ ವಿರುದ್ಧ ಸೋಲು
ಗೀತಾ ಶಿವರಾಜ್ಕುಮಾರ್ ಅವರು 2014 ರಲ್ಲಿ ಜೆಡಿಎಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಫರ್ಧೆ ಮಾಡಿದ್ದರು. ಬಿಎಸ್ವೈ ವಿರುದ್ಧ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು. ಆಗ ಸಹೋದರ ಮಧು ಬಂಗಾರಪ್ಪ ಅವರು ಜೆಡಿಎಸ್ ಪಕ್ಷದಲ್ಲಿದ್ದರು.
ಸಹೋದರನ ಹಾದಿ
ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇದೀಗ ಸಹೋದರ ನಡೆಯನ್ನೇ ಹಿಂಬಾಲಿಸಿರುವ ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಸೇರುತ್ತಿದ್ದಾರೆ. ಇದನ್ನೂ ಓದಿ: ನನ್ನನ್ನು ಸೋಲಿಸಬೇಕೆಂದೇ ಬಿಜೆಪಿ-ಕಾಂಗ್ರೆಸ್ ಒಂದಾಗಿದೆ: ನಿಖಿಲ್ ಕುಮಾರಸ್ವಾಮಿ
ಮಧು ಬಂಗಾರಪ್ಪ ಅವರು ಸೊರಬ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಸಹೋದರನ ಗೀತಾ ಶಿವರಾಜ್ಕುಮಾರ್ ಅವರು ಪ್ರಚಾರ ಸಹ ಮಾಡುತ್ತಿದ್ದಾರೆ. ಹೀಗಾಗಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. (ದಿಗ್ವಿಜಯ ನ್ಯೂಸ್)
ಮಲ್ಲಿಕಾರ್ಜುನ ಖರ್ಗೆ ಕೂಡಲೇ ಮೋದಿಯವರ ಬಳಿ ಕ್ಷಮೆ ಕೇಳಬೇಕು:ಶೋಭಾ ಕರಂದ್ಲಾಜೆ
ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಬಿಜೆಪಿಯೋ? ಸಿದ್ದು ಕಿಡಿ
https://www.vijayavani.net/submission-of-duplicate-form-a-form-and-b-form-aiadmk-candidate-file-an-fir-in-bangalore