ಬೆಂಗಳೂರು: ಇಂದು (ಮಾರ್ಚ್ 16) ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು, ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ.
ಮೊದಲ ಹಂತ ಏಪ್ರಿಲ್ 26 ಮತ್ತು ಎರಡನೇ ಹಂತದ ಮತದಾನ ಮೇ 7ಕ್ಕೆ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಮಧ್ಯಾಹ್ನ 3 ಗಂಟೆಗೆ ರಾಷ್ಟ್ರ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಯಿತು.
ಕರ್ನಾಟಕದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ನಿಂದ 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದರೆ, 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್ಗೆ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಬಿಜೆಪಿ ಬಿಟ್ಟು ಕೊಟ್ಟಿದೆ ಎಂಬ ಮಾಹಿತಿ ಇದೆ.
ಕರ್ನಾಟಕದ 20 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ
* ಚಿಕ್ಕೋಡಿ: ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ
* ಬಾಗಲಕೋಟೆ: ಪಿ.ಸಿ. ಗದ್ದಿಗೌಡರ್
* ಬಿಜಾಪುರ (ಎಸ್ಸಿ): ರಮೇಶ್ ಜಿಗಜಿಣಗಿ
* ಕಲಬುರಗಿ (ಎಸ್ಸಿ): ಡಾ. ಉಮೇಶ್ ಜಾಧವ್
* ಬೀದರ್: ಭಗವಂತ್ ಖೂಬಾ
* ಕೊಪ್ಪಳ: ಡಾ. ಬಸವರಾಜ್ ಕ್ಯಾವತೋರ್
* ಬಳ್ಳಾರಿ: ಬಿ. ಶ್ರೀರಾಮುಲು
* ಹಾವೇರಿ: ಬಸವರಾಜ ಬೊಮ್ಮಾಯಿ
* ಧಾರವಾಡ: ಪ್ರಲ್ಹಾದ್ ಜೋಶಿ
* ದಾವಣಗೆರೆ: ಗಾಯತ್ರಿ ಸಿದ್ದೇಶ್ವರ
* ಶಿವಮೊಗ್ಗ: ಬಿ.ವೈ. ರಾಘವೇಂದ್ರ
* ಉಡುಪಿ-ಚಿಕ್ಕಮಗಳೂರು: ಕೋಟಾ ಶ್ರೀನಿವಾಸ ಪೂಜಾರಿ
* ದಕ್ಷಿಣ ಕನ್ನಡ: ಕ್ಯಾಪ್ಟನ್ ಬ್ರಿಜೇಶ್ ಚೌಟಾ
* ತುಮಕೂರು: ವಿ. ಸೋಮಣ್ಣ
* ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
* ಚಾಮರಾಜನಗರ: ಬಿ. ಬಾಲರಾಜ್
* ಬೆಂಗಳೂರು ಗ್ರಾಮಾಂತರ: ಡಾ.ಸಿ.ಎನ್. ಮಂಜುನಾಥ್
* ಬೆಂಗಳೂರು ಕೇಂದ್ರ: ಪಿ.ಸಿ. ಮೋಹನ್
* ಬೆಂಗಳೂರು ಉತ್ತರ: ಕುಮಾರಿ ಶೋಭಾ ಕರಂದ್ಲಾಜೆ
* ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
ಕಾಂಗ್ರೆಸ್ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಹಾ ಶಿವರಾತ್ರಿ ಶುಭದಿನದಂದು ಬಿಡುಗಡೆ ಮಾಡಿತು. ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.
ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ:
* ವಿಜಯಪುರ: ಎಚ್.ಆರ್.ಅಲಗೂರು
* ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್
* ಹಾಸನ: ಶ್ರೇಯಸ್ ಪಾಟೀಲ್
* ತುಮಕೂರು: ಎಸ್ಪಿ ಮುದ್ದಹನುಮೇಗೌಡ
* ಬೆಂಗಳೂರು ಗ್ರಾಮಾಂತರ: ಡಿಕೆ ಸುರೇಶ್
* ಹಾವೇರಿ: ಆನಂದ್ಸ್ವಾಮಿ ಗಡ್ಡ ದೇವರಮಠ
* ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ಬಿಜೆಪಿಗೆ ಬಂಡಾಯದ ಬಿಸಿ
ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ತಮ್ಮ ಪುತ್ರಿನಿಗೆ ಟಿಕೆಟ್ ಮಿಸ್ ಆಗಿದ್ದಕ್ಕೆ ಆಕ್ರೋಶಗೊಂಡಿರುವ ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುವುದಾಗಿ ಘೋಷಣೆ ಮಾಡಿದ್ದಾರೆ. ಅದರಲ್ಲೂ ಶಿವಮೊಗ್ಗದಿಂದ ಹಾಲಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧವೇ ಅಖಾಡಕ್ಕೆ ಇಳಿಯುವುದಾಗಿ ಹೇಳಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣಾ ಅಖಾಡ ಬಹಳ ರಂಗೇರಿದೆ.
ಕಳೆದ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಆದರೆ, ರಾಜ್ಯದ ಜನರು ಮೈತ್ರಿಯ ಕೈಹಿಡಿಯಲಿಲ್ಲ. ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ 1 ಸ್ಥಾನಗಳೊಂದಿಗೆ ತೀವ್ರ ಹಿನ್ನಡೆಯನ್ನು ಅನುಭವಿಸಿತು. ಸಂಸದೆ ಸುಮಲತಾ ಅಂಬರೀಷ್ ಪಕ್ಷೇತರರಾಗಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯಭೇರಿ ಬಾರಿಸಿದರು.
ಲೋಕಸಮರಕ್ಕೆ ಮುಹೂರ್ತ ಫಿಕ್ಸ್: 7 ಹಂತದಲ್ಲಿ ಮತದಾನ, ಏಪ್ರಿಲ್ 19 ರಂದು ಆರಂಭ, ಜೂನ್ 4ಕ್ಕೆ ಫಲಿತಾಂಶ