More

    ಲೋಕಸಭಾ ಚುನಾವಣೆ 2024: ಕರ್ನಾಟಕದಲ್ಲಿ ಏಪ್ರಿಲ್ 26, ಮೇ 7ರಂದು 2 ಹಂತದಲ್ಲಿ ಮತದಾನ

    ಬೆಂಗಳೂರು: ಇಂದು (ಮಾರ್ಚ್​ 16) ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು, ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ.

    ಮೊದಲ ಹಂತ ಏಪ್ರಿಲ್ 26 ಮತ್ತು ಎರಡನೇ ಹಂತದ ಮತದಾನ ಮೇ 7ಕ್ಕೆ ನಡೆಯಲಿದೆ. ಜೂನ್​ 4ರಂದು ಫಲಿತಾಂಶ ಪ್ರಕಟವಾಗಲಿದೆ.

    ಮಧ್ಯಾಹ್ನ 3 ಗಂಟೆಗೆ ರಾಷ್ಟ್ರ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್​ ಕುಮಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಯಿತು.

    ಲೋಕಸಭಾ ಚುನಾವಣೆ 2024: ಕರ್ನಾಟಕದಲ್ಲಿ ಏಪ್ರಿಲ್ 26, ಮೇ 7ರಂದು 2 ಹಂತದಲ್ಲಿ ಮತದಾನ

    ಲೋಕಸಭಾ ಚುನಾವಣೆ 2024: ಕರ್ನಾಟಕದಲ್ಲಿ ಏಪ್ರಿಲ್ 26, ಮೇ 7ರಂದು 2 ಹಂತದಲ್ಲಿ ಮತದಾನ

    ಕರ್ನಾಟಕದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್​ನಿಂದ 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದ್ದರೆ, 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ಈ ಬಾರಿ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್​ಗೆ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಬಿಜೆಪಿ ಬಿಟ್ಟು ಕೊಟ್ಟಿದೆ ಎಂಬ ಮಾಹಿತಿ ಇದೆ.

    ಕರ್ನಾಟಕದ 20 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ
    * ಚಿಕ್ಕೋಡಿ: ಅಣ್ಣಾ ಸಾಹೇಬ್​ ಶಂಕರ್​ ಜೊಲ್ಲೆ
    * ಬಾಗಲಕೋಟೆ: ಪಿ.ಸಿ. ಗದ್ದಿಗೌಡರ್
    * ಬಿಜಾಪುರ (ಎಸ್​ಸಿ): ರಮೇಶ್​ ಜಿಗಜಿಣಗಿ
    * ಕಲಬುರಗಿ (ಎಸ್​ಸಿ): ಡಾ. ಉಮೇಶ್​ ಜಾಧವ್​
    * ಬೀದರ್​: ಭಗವಂತ್ ಖೂಬಾ
    * ಕೊಪ್ಪಳ: ಡಾ. ಬಸವರಾಜ್​ ಕ್ಯಾವತೋರ್
    * ಬಳ್ಳಾರಿ: ಬಿ. ಶ್ರೀರಾಮುಲು
    * ಹಾವೇರಿ: ಬಸವರಾಜ ಬೊಮ್ಮಾಯಿ
    * ಧಾರವಾಡ: ಪ್ರಲ್ಹಾದ್​ ಜೋಶಿ
    * ದಾವಣಗೆರೆ: ಗಾಯತ್ರಿ ಸಿದ್ದೇಶ್ವರ
    * ಶಿವಮೊಗ್ಗ: ಬಿ.ವೈ. ರಾಘವೇಂದ್ರ
    * ಉಡುಪಿ-ಚಿಕ್ಕಮಗಳೂರು: ಕೋಟಾ ಶ್ರೀನಿವಾಸ ಪೂಜಾರಿ
    * ದಕ್ಷಿಣ ಕನ್ನಡ: ಕ್ಯಾಪ್ಟನ್​ ಬ್ರಿಜೇಶ್​ ಚೌಟಾ
    * ತುಮಕೂರು: ವಿ. ಸೋಮಣ್ಣ
    * ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​
    * ಚಾಮರಾಜನಗರ: ಬಿ. ಬಾಲರಾಜ್
    * ಬೆಂಗಳೂರು ಗ್ರಾಮಾಂತರ: ಡಾ.ಸಿ.ಎನ್. ಮಂಜುನಾಥ್
    * ಬೆಂಗಳೂರು ಕೇಂದ್ರ: ಪಿ.ಸಿ. ಮೋಹನ್
    * ಬೆಂಗಳೂರು ಉತ್ತರ: ಕುಮಾರಿ ಶೋಭಾ ಕರಂದ್ಲಾಜೆ
    * ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ

    ಕಾಂಗ್ರೆಸ್​ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಹಾ ಶಿವರಾತ್ರಿ ಶುಭದಿನದಂದು ಬಿಡುಗಡೆ ಮಾಡಿತು. ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.

    ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ:
    * ವಿಜಯಪುರ: ಎಚ್​.ಆರ್.ಅಲಗೂರು
    * ಶಿವಮೊಗ್ಗ: ಗೀತಾ ಶಿವರಾಜ್​ಕುಮಾರ್​
    * ಹಾಸನ: ಶ್ರೇಯಸ್​ ಪಾಟೀಲ್
    * ತುಮಕೂರು: ಎಸ್​ಪಿ ಮುದ್ದಹನುಮೇಗೌಡ
    * ಬೆಂಗಳೂರು ಗ್ರಾಮಾಂತರ: ಡಿಕೆ ಸುರೇಶ್
    * ಹಾವೇರಿ: ಆನಂದ್​ಸ್ವಾಮಿ ಗಡ್ಡ ದೇವರಮಠ
    * ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)

    ಬಿಜೆಪಿಗೆ ಬಂಡಾಯದ ಬಿಸಿ
    ಟಿಕೆಟ್​ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ತಮ್ಮ ಪುತ್ರಿನಿಗೆ ಟಿಕೆಟ್​ ಮಿಸ್​ ಆಗಿದ್ದಕ್ಕೆ ಆಕ್ರೋಶಗೊಂಡಿರುವ ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುವುದಾಗಿ ಘೋಷಣೆ ಮಾಡಿದ್ದಾರೆ. ಅದರಲ್ಲೂ ಶಿವಮೊಗ್ಗದಿಂದ ಹಾಲಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧವೇ ಅಖಾಡಕ್ಕೆ ಇಳಿಯುವುದಾಗಿ ಹೇಳಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣಾ ಅಖಾಡ ಬಹಳ ರಂಗೇರಿದೆ. ​

    ಕಳೆದ ಬಾರಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡಿತ್ತು. ಆದರೆ, ರಾಜ್ಯದ ಜನರು ಮೈತ್ರಿಯ ಕೈಹಿಡಿಯಲಿಲ್ಲ. ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್​ ಹಾಗೂ ಜೆಡಿಎಸ್ ತಲಾ​ 1 ಸ್ಥಾನಗಳೊಂದಿಗೆ ತೀವ್ರ ಹಿನ್ನಡೆಯನ್ನು ಅನುಭವಿಸಿತು. ಸಂಸದೆ ಸುಮಲತಾ ಅಂಬರೀಷ್​ ಪಕ್ಷೇತರರಾಗಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಜಯಭೇರಿ ಬಾರಿಸಿದರು.

    ಲೋಕಸಮರಕ್ಕೆ ಮುಹೂರ್ತ ಫಿಕ್ಸ್: 7 ಹಂತದಲ್ಲಿ ಮತದಾನ, ಏಪ್ರಿಲ್​ 19 ರಂದು ಆರಂಭ, ಜೂನ್​ 4ಕ್ಕೆ ಫಲಿತಾಂಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts