ತರಬೇತಿ ಪಡೆದು ಸ್ವಾವಲಂಬನೆ ಸಾಧಿಸಿ:ಆಶಾ ಶೇಷಾದ್ರಿ

kvk

ಶಿವಮೊಗ್ಗ: ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿರುವುದು ಸಂತಸದ ವಿಷಯ. ಮಹಿಳೆಯರಿಗೆ ಕೃಷಿ ವರದಾನವೆಂದರೆ ತಪ್ಪಾಗಲಾರದು ಎಂದು ಪ್ರಗತಿಪರ ರೈತ ಮಹಿಳೆ ಕನ್ನಂಗಿ ಆಶಾ ಶೇಷಾದ್ರಿ ಅಭಿಪ್ರಾಯಪಟ್ಟರು.

ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ ಕೃಷಿ ನಿರತ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಎಂಬುದು ನಿವೃತ್ತಿಯೇ ಇಲ್ಲದ ವೃತ್ತಿ. ಹಿಂದಿದ್ದ ಆಹಾರ ಭದ್ರತೆ, ಆದಾಯ ಇಂದು ಕೃಷಿಯಲ್ಲಿ ಕಡಿತವಾಗಿರುವುದು ಗಮನಾರ್ಹ ಸಂಗತಿ ಎಂದರು.
ಕೃಷಿ ವಿಜ್ಞಾನ ಕೇಂದ್ರದಿಂದ ಆಯೋಜಿಸುವ ವಿವಿಧ ತರಬೇತಿಗಳಲ್ಲಿ ರೈತ ಮಹಿಳೆಯರು ಭಾಗವಹಿಸಿ, ನೂತನ ತಂತ್ರಜ್ಞಾನ, ಕೃಷಿಯಲ್ಲಿನ ವಿನೂತನ ಆವಿಷ್ಕಾರ, ವಿವಿಧ ಬೆಳೆಗಳು, ಪುಷ್ಪ ಕೃಷಿ, ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ, ನಿರಂತರ ಆದಾಯಕ್ಕೆ ಕೃಷಿಯೇತರ ಚಟುವಟಿಕೆಗಳಾದ ಕುರಿ, ಕೋಳಿ, ಮೀನು ಸಾಕಣೆ, ಹೈನುಗಾರಿಕೆ, ಜೇನು ಕೃಷಿ ಬಗ್ಗೆ ಮಾಹಿತಿ ಪಡೆದುಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕೆಂದರು.
ಕುಲಪತಿ ಡಾ. ಆರ್.ಸಿ.ಜಗದೀಶ ಮಾತನಾಡಿ, ಮಹಿಳೆಯರು ಕೃಷಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಕಾರ್ಮಿಕ ಮೇಲ್ವಿಚಾರಣೆ, ಕೊಯ್ಲಿನ ನಂತರದ ಕಾರ್ಯಾಚರಣೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಹೈನು ಉತ್ಪಾದನೆ, ಜಾನುವಾರು ನಿರ್ವಹಣೆ ಜತೆಗೆ ಕುಟುಂಬದ ನಿರ್ವಹಣೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾರೆ ಎಂದು ತಿಳಿಸಿದರು.
ಮಹಿಳಾ ಕೃಷಿ ಸಾಧಕರಾದ ಡ್ರೋನ್ ದೀದಿ ಚುರ್ಚಿಗುಂಡಿಯ ಆಶಾರಾಣಿ, ಮಹಿಳಾ ಉದ್ಯಮಿ ತಲವಾಟದ ಪ್ರತಿಭಾ ತ್ರಯಂಬಕ ರಾವ್, ದೊಡ್ಡೇರಿ ಗ್ರಾಮದ ಎಂ.ಎಸ್.ಅರುಣಾದೇವಿ ಅವರನ್ನು ಸನ್ಮಾನಿಸಲಾಯಿತು.
ವಿವಿ ಕುಲಸಚಿವ ಡಾ.ಕೆ.ಸಿ.ಶಶಿಧರ, ಶಿಕ್ಷಣ ನಿರ್ದೇಶಕ ಡಾ. ಬಿ.ಹೇಮ್ಲಾ ನಾಯ್ಕ, ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ.ಗುರುಮೂರ್ತಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲ್, ಮಣ್ಣು ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಎಂ.ಸಿ.ಅಂಜಲಿ ಇತರರಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…