ಶ್ರೀನಗರ: ಯಾವುದೇ ಪಕ್ಷದವರು ತಮ್ಮ ಪ್ರತಿಪಕ್ಷದ ನಾಯಕನನ್ನು ವಿರೋಧಿಸಿ ಅವರ ಪ್ರತಿಕೃತಿ ಸುಟ್ಟು ಹಾಕುವ ಸುದ್ದಿಗಳನ್ನು ಕೇಳಿರುತ್ತೀರಿ, ನೋಡಿರುತ್ತೀರಿ. ಆದರೆ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದರು ಎನ್ನುವ ಕಾರಣಕ್ಕೆ ಅವರದ್ದೇ ಪ್ರತಿಕೃತಿಯನ್ನು ಅವರ ಪಕ್ಷದ ಕಾರ್ಯಕರ್ತರೇ ಸುಟ್ಟು ಹಾಕಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಇತ್ತೀಚೆಗೆ ರಾಜ್ಯ ಸಭೆಯಿಂದ ನಿವೃತ್ತರಾದ ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ಪ್ರತಿಕೃತಿಯನ್ನು ಜಮ್ಮು ಕಾಶ್ಮೀರದ ಕಾಂಗ್ರೆಸ್ ಕಾರ್ಯಕರ್ತರು ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ಶನಿವಾರದಂದು ಕಾಂಗ್ರೆಸ್ನ ಜಿ 23 ಸಭೆ ನಡೆದಿತ್ತು. ಅದರಲ್ಲಿ ಕಾಂಗ್ರೆಸ್ ಶಕ್ತಿ ಕುಂದುತ್ತಿರುವುದಾಗಿ ಹಿರಿಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದಾದ ಮಾರನೇ ದಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಗುಲಾಂ ನಬಿ ಅವರು ಮೋದಿಯವರು ನಮ್ಮ ದೇಶದ ಹೆಮ್ಮೆಯ ಚಾಯ್ವಾಲಾ. ಅವರು ಪ್ರಧಾನಿ ಸ್ಥಾನಕ್ಕೇರಿದರೂ ತಮ್ಮ ಬೇರನ್ನು ಮರೆತಿಲ್ಲ ಎಂದು ಹೊಗಳಿದ್ದರು. ಈ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ತೆಗೆದಿದ್ದಾರೆ. ಆಜಾದ್ ಅವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಆಗ್ರಹಿಸಲಾರಂಭಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಹಿರಿಯ ನಾಯಕನ ಪ್ರತಿಕೃತಿ ದಹಿಸುತ್ತಿರುವ ದೃಶ್ಯ ಮತ್ತು ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ದೃಶ್ಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪಕ್ಷವು ಅವರನ್ನು ಗೌರವದ ಸ್ಥಾನದಲ್ಲಿ ನೋಡುತ್ತದೆ, ಆದರೆ ಅವರು ಕಾಂಗ್ರೆಸ್ನ್ನು ಬಿಟ್ಟು ಬಿಜೆಪಿಯನ್ನು ಬೆಂಬಲಿಸಲಾರಂಭಿಸಿದ್ದಾರೆ ಎಂದು ಕಾರ್ಯಕರ್ತರು ದೂರಿರುವುದಾಗಿ ವರದಿಯಾಗಿದೆ. (ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
19ರ ಹರೆಯದ ಯುವತಿಗೆ 1800 ಕೋಟಿ ರೂಪಾಯಿಯ ಲಾಟರಿ! ಆದರೆ ಅದರಲ್ಲೂ ಇದೆ ಬಿಗ್ ಟ್ವಿಸ್ಟ್!
ಇಂದಿರಾ ಗಾಂಧಿ ಕುಟುಂಬದ ಕುಡಿಗೆ ಟೀ ಎಸ್ಟೇಟ್ನಲ್ಲಿ ಕೆಲಸ! ವೈರಲ್ ಆಯ್ತು ಪ್ರಿಯಾಂಕಾ ವಿಡಿಯೋ