ಬೆಂಗಳೂರು: ಯುವತಿ ಜತೆಗೆ ಅಸಭ್ಯ ವರ್ತನೆ ತೋರಿದ ಆರೋಪದಡಿ ಕ್ಯಾಬ್ ಚಾಲಕನನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 9ರ ಮಧ್ಯರಾತ್ರಿ 1ರಿಂದ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾಕೋಳು ಮೂಲದ ಮಂಜುನಾಥ್ ಬಂಧಿತ ಆರೋಪಿ. ನಿನ್ನೆ ರಾತ್ರಿ ಯುವತಿ ಹಾಗೂ ಆಕೆಯ ಗೆಳೆಯರಿಬ್ಬರು ಪಾರ್ಟಿ ಮುಗಿಸಿ ಮನೆಗೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಾರೆ. ಕುಡಿತದ ಅಮಲಿನಲ್ಲಿದ್ದ ಯುವತಿ ಕ್ಯಾಬ್ನಿಂದ ಇಳಿಯುವಾಗ ಚಾಲಕನ ಸಹಾಯ ಕೇಳಿದ್ದಾಳಂತೆ. ಈ ವೇಳೆ ಆಕೆಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಮೇರೆಗೆ ಬುಧವಾರ ರಾತ್ರೋರಾತ್ರಿ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಏಳೇಳು ದಾಖಲೆಗಳ ಸರದಾರ ಯೋಗಿ ಆದಿತ್ಯನಾಥ: 37 ವರ್ಷಗಳಲ್ಲಿ ಅಧಿಕಾರ ಉಳಿಸಿಕೊಂಡ ಮೊದಲ ಸಿಎಂ
ಯಾರೂ ಕಾಲಿಡದ ಜಾಗಕ್ಕೆ ಭೇಟಿ ನೀಡಿ ಗೆದ್ದು ಬೀಗಿದ ಯೋಗಿ: 29 ವರ್ಷಗಳ ನಂಬಿಕೆಯೇ ಸುಳ್ಳಾಗೋಯ್ತು!