ಆನೇಕಲ್: ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಟೌನ್ನಲ್ಲಿ ಸೋಮವಾರ ನಡೆದಿದೆ.
ಇದನ್ನೂ ಓದಿ: ಕರೊನಾ ಸಂಕಷ್ಟ ಕಾಲದಲ್ಲಿ ದೇಹರಕ್ಷಣೆಗೆ ಮೂರು ಸೂತ್ರಗಳು
ಬಿ.ತನುಜ(22) ನೇಣಿಗೆ ಶರಣಾದ ಯುವತಿ. ದ್ವಿತೀಯ ಪಿಯುಸಿ ಓದಿದ್ದ ತನುಜ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಸಂಜೆ 6 ಗಂಟೆಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ತನುಜ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಕರ ಕೈಕೊಟ್ಟಿದ್ದಕ್ಕೆ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.
ತನುಜ ಅವರ ತಂದೆ-ತಾಯಿ ಕೈಮಗ್ಗ ನಡೆಸುತ್ತ ಜೀವನ ನಡೆಸುತ್ತಿದ್ದಾರೆ. ಇದೀಗ ಬೆಳೆದ ಮಗಳನ್ನು ಕಳೆದುಕೊಂಡು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹವನ್ನು ಮುಂದಿನ ಕ್ರಮಕ್ಕಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)
ಇದನ್ನೂ ಓದಿ: 222 ಮಾರ್ಗಗಳಲ್ಲಿ ಬಸ್ ಸಂಚಾರ ರದ್ದು