ಯಾದಗಿರಿ: ಬೇಸಿಗೆಯ ಈ ರಜೆಯ ಸಂದರ್ಭದಲ್ಲಿ ಮಕ್ಕಳು ದುರಂತ ಸಾವಿಗೀಡಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ಬಾಲಕಿಯೊಬ್ಬಳು ಟ್ರಾನ್ಸ್ಫಾರ್ಮರ್ ಸ್ಪರ್ಶದಿಂದ ಶಾಕ್ಗೆ ಒಳಗಾಗಿ ಸಾವಿಗೀಡಾಗಿದ್ದಾಳೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ಈ ಸಾವು ಸಂಭವಿಸಿದೆ. ಅಂಜಲಿ ಎಂಬಾಕೆ ಸಾವಿಗೀಡಾದ ಬಾಲಕಿ. ಈ ಬಾಲಕಿಯ ಸಾವಿಗೆ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಇದೇ ಸ್ಥಳದಲ್ಲಿ ಜೆಟ್ಟೆಪ್ಪ ಎಂಬ ಯುವಕ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದ. ಯುವಕ ಮೃತ ಪಟ್ಟ ನಂತರವೂ ಈ ಟ್ರಾನ್ಸ್ಫಾರ್ಮರ್ ಸುತ್ತ ಯಾವುದೇ ಸುರಕ್ಷಿತ ಕ್ರಮಕೈಗೊಳ್ಳದೆ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪದೇಪದೆ ವಿದ್ಯುತ್ ಅವಘಡಗಳು ಸಂಭವಿಸಿ ಜೀವಹಾನಿಯಾದರೂ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುತ್ತಿಲ್ಲ. ಟ್ರಾನ್ಸ್ಫಾರ್ಮರ್ಗೆ ಸುತ್ತುಗೋಡೆ ನಿರ್ಮಾಣ ಮಾಡಿ ಸುರಕ್ಷತಾ ಕ್ರಮವಹಿಸಬೇಕು, ಅಲ್ಲದೆ ಸಾವಿಗೀಡಾದ ಬಾಲಕಿಯ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಲಾಕ್ಡೌನ್ ಸೆಕ್ಸ್: ಆರ್ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!
ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!