‘ಆತ್ಮರಕ್ಷಣೆಗಾಗಿ ಹುಡುಗಿಯರು ಯಾರನ್ನು ಬೇಕಾದರೂ ಕೊಲ್ಲಬಹುದು’

ಹೈದರಾಬಾದ್​: ಆತ್ಮರಕ್ಷಣೆಗಾಗಿ ಹುಡುಗಿಯರು ಯಾರನ್ನು ಬೇಕಾದರೂ ಕೊಲ್ಲಬಹುದು ಎಂದು ಹೈದರಾಬಾದ್​ನ ಮೆಟ್ರೋಪಾಲಿಟನ್ ಕಾನೂನು ಸೇವೆಗಳ ಪ್ರಾಧಿಕಾರ (ಎಂಎಲ್​​​ಎಸ್​ಎ)ದ ಕಾರ್ಯದರ್ಶಿ ಎಂ. ರಾಧಾಕೃಷ್ಣ ಚೌಹಾನ್​ ಹೇಳಿದ್ದಾರೆ. ರಾಷ್ಟ್ರೀಯ ಹೆಣ್ಣು ಮಗುವಿನ ದಿನ ಹಿನ್ನೆಲೆಯಲ್ಲಿ ಗೊಲ್ಕೊಂಡದ ಬಾಲಕಿಯರ ಸರ್ಕಾರಿ ಶಾಲೆಯಲ್ಲಿ ಎಂಎಲ್​ಎಸ್​ಎ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ರಾಧಾಕೃಷ್ಣ ಅವರು ಮಾತನಾಡಿದರು. ಹೊರಗಡೆ ಹೋಗುವಾಗ ಜತೆಯಲ್ಲಿ ಪೆಪ್ಪರ್​ ಸ್ಪ್ರೇ ತೆಗೆದುಕೊಂಡು ಹೋಗಲು ಹೆಣ್ಣು ಮಕ್ಕಳಿಗೆ ಸಲಹೆ ನೀಡಿ, ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಆತ್ಮರಕ್ಷಣೆಗಾಗಿ ಕೊಲ್ಲುವುದು ಅಪರಾಧವಲ್ಲ ಎಂದು ತಿಳಿಸಿದರು. ಇದನ್ನೂ … Continue reading ‘ಆತ್ಮರಕ್ಷಣೆಗಾಗಿ ಹುಡುಗಿಯರು ಯಾರನ್ನು ಬೇಕಾದರೂ ಕೊಲ್ಲಬಹುದು’