ಫೆ.11ರಿಂದ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ.ಪಾಟೀಲ ಮಾಹಿತಿ | ₹ 10 lakh crore investment expectation

blank

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್)ಕ್ಕೆ ವೇದಿಕೆ ಬಹುತೇಕ ಸಜ್ಜಾಗಿದೆ. ಗಣ್ಯರು, ಉದ್ಯಮಿಗಳು, ಹೂಡಿಕೆದಾರರು ಮತ್ತು ಪರಿಣತರ ಪಟ್ಟಿಯು ಅಂತಿಮಗೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದರು.

ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ಹಂಚಿಕೊಂಡ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಫೆ.11ರ ಸಂಜೆ 4ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದು, ಫೆ.14ರಂದು ಸಮಾರೋಪ ಸಮಾರಂಭ ನಡೆಯಲಿದೆ.

ಈ ಬಾರಿ ಜಿಮ್‌ನಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ ನಿರೀಕ್ಷೆಯಂತೆ ಅಷ್ಟೂ ಮೊತ್ತ ದೃಢಪಟ್ಟಿದೆ. ಒಡಂಬಡಿಕೆಯಲ್ಲಿ ಶೇ.75ರಷ್ಟು ವಾಸ್ತವಿಕವಾಗಿ ಹೂಡಿಕೆಯಾಗುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಶ್ರಮವಹಿಸಿದೆ ಎಂದು ಎಂ.ಬಿ.ಪಾಟೀಲ ಪುನರುಚ್ಚರಿಸಿದರು.

ಥೀಮ್‌ನ ತಿರುಳು

‘ಪ್ರಗತಿಯ ಮರುಕಲ್ಪನೆ’ ಥೀಮ್‌ನಡಿ ಸಮಾವೇಶ ಆಯೋಜಿಸಲಾಗಿದೆ. ರಾಜಕೀಯ ಸೂಕ್ಷ್ಮ ಸನ್ನಿವೇಶ, ಯೂಕ್ರೇನ್-ರಷ್ಯಾ ಯುದ್ಧ, ಬದಲಾದ ಜಾಗತಿಕ ಪರಿಸ್ಥಿತಿ ಗಮನಿಸಿ, ಈ ಥೀಮ್ ಕಂಡುಕೊಳ್ಳಲಾಗಿದೆ.

ತಂತ್ರಜ್ಞಾನ, ಪರಿಸರ ಸ್ನೇಹಿ, ಎಲ್ಲರನ್ನು ಒಳಗೊಳ್ಳುವಿಕೆ ಮತ್ತು ಸವಾಲುಗಳನ್ನು ಸಮರ್ಥವಾಗಿ ಎದುರಿಸುವುದೇ ‘ಪ್ರಗತಿಯ ಮರುಕಲ್ಪನೆಯ’ ಮುಖ್ಯಾಂಶವಾಗಿದೆ. ಹವಾಮಾನ ಬದಲಾವಣೆ ಸವಾಲಿನ ಕಾರ್ಯತಂತ್ರ, ಕೃತಕ ಬುದ್ಧಿಮತ್ತೆ, ಹಸಿರು ಇಂಧನದ ಬೆಳವಣಿಗೆಯನ್ನು ಈ ಥೀಮ್ ಪರಿಗಣಿಸಿದೆ ಎಂದರು.

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…