More

    ಬೆಂಗ್ಳೂರು ಏರ್​​ಪೋರ್ಟ್​ನಲ್ಲಿ 54 ಪ್ರಯಾಣಿಕರನ್ನು ಬಿಟ್ಟು ವಿಮಾನ ಟೇಕಾಫ್​ ಪ್ರಕರಣ: ಗೋಫಸ್ಟ್​ ಸಂಸ್ಥೆಗೆ 10 ಲಕ್ಷ ರೂ. ದಂಡ

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಟರ್ಮಿನಲ್​ನಲ್ಲೇ ಬಿಟ್ಟು ವಿಮಾನ ಟೇಕಾಫ್​ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಗೋ ಫಸ್ಟ್ ಏರ್ಲೈನ್ಸ್ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

    ಈ ಘಟನೆ ಜ.9ರಂದು ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ G8 116 ನಂಬರ್​ನ ಗೋಫಸ್ಟ್ ವಿಮಾನ ಹೊರಟಿತ್ತು. ಮೊದಲನೇ ಟ್ರಿಪ್​​ನಲ್ಲಿ ವಿಮಾನಕ್ಕೆ‌ ಬಸ್​ನಲ್ಲಿ ಹೋಗಿ 50 ಜನ ಪ್ರಯಾಣಿಕರು ಹತ್ತಿದ್ದರು. ಎರಡನೇ ಟ್ರಿಪ್​​ನಲ್ಲಿ 54 ಜನರನ್ನು ಟರ್ಮಿನಲ್​​ನಿಂದ ವಿಮಾನದ ಬಳಿಗೆ ಬಸ್ ಕರೆದೊಯ್ಯಬೇಕಿತ್ತು. ಆದರೆ, ಬಸ್​ ಪ್ರಯಾಣಿಕರನ್ನು ಕರೆತರುವ ಮುನ್ನವೆ ವಿಮಾನ ಟೇಕಾಫ್​ ಆಗಿತ್ತು. ಪ್ರಯಾಣಿಕರನ್ನು ಗಮನಿಸದೆ ಏರ್​ಲೈನ್ಸ್​ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ ಅಂತ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ, ಗೋಫಸ್ಟ್​ ಏರ್​ಲೈನ್ಸ್​ ವಿರುದ್ಧ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಅಸಮಾಧಾನ ಹೊರ ಹಾಕಿದ್ದರು. ಸಾಮಾಜಿಕ ಜಾಲತಾಣದಲ್ಲೂ ಭಾರೀ ಟೀಕೆ ವ್ಯಕ್ತವಾಗಿತ್ತು.

    ಟ್ವಿಟರ್​ನಲ್ಲಿ ಗೋಫಸ್ಟ್ ಮತ್ತು ಡಿಜಿಸಿಎಗೆ 50 ಕ್ಕೂ ಅಧಿಕ‌ ಪ್ರಯಾಣಿಕರು ಟ್ವೀಟ್​ ಮಾಡಿ ಸಮಯಕ್ಕೆ ಸರಿಯಾಗಿ ಹೋಗಲು ಆಗಿಲ್ಲ ಅಂತ ಬೇಸರ ಹೊರಹಾಕಿದ್ದರು. ಇದಾದ ಬಳಿಕ ಗೋಫಸ್ಟ್​ ಸಂಸ್ಥೆಗೆ ಡಿಜಿಸಿಎ ಶೋಕಾಸ್​ ನೋಟಿಸ್​ ನೀಡಿ, ಕಾರಣ ತಿಳಿಸುವಂತೆ ಹೇಳಿತ್ತು. ಅಲ್ಲದೆ, ತಮ್ಮ ನಿಯಂತ್ರಕ ಕಟ್ಟುಪಾಡುಗಳ ಲೋಪಕ್ಕಾಗಿ ವಿಮಾನಯಾನ ಸಂಸ್ಥೆಯ ವಿರುದ್ಧ ಏಕೆ ಜಾರಿ ಕ್ರಮ ತೆಗೆದುಕೊಳ್ಳಬಾರದು ಎಂದು ಕೇಳಿತ್ತು.

    ಇದಕ್ಕೆ ಜನವರಿ 25ರಂದು ಗೋಫಸ್ಟ್​ ಏರ್​ಲೈನ್​ ಸಂಸ್ಥೆ ಉತ್ತರ ನೀಡಿತ್ತು. ವಾಣಿಜ್ಯ ಸಿಬ್ಬಂದಿ ಮತ್ತು ಸಿಬ್ಬಂದಿ ನಡುವೆ ವಿಮಾನದಲ್ಲಿ ಪ್ರಯಾಣಿಕರನ್ನು ಹತ್ತುವುದಕ್ಕೆ ಸಂಬಂಧಿಸಿದಂತೆ ಅಸಮರ್ಪಕ ಸಂವಹನ ಮತ್ತು ಸಮನ್ವಯದ ಕೊರತೆಯಿಂದ ತಪ್ಪು ನಡೆದಿದೆ ಎಂದು ಹೇಳಿತ್ತು. ಆದರೆ, ಈ ಉತ್ತರ ಡಿಜಿಸಿಎಗೆ ಸಮಾಧಾನ ನೀಡದಿದ್ದರಿಂದ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. (ಏಜೆನ್ಸೀಸ್​)

    54 ಪ್ರಯಾಣಿಕರನ್ನು ಟರ್ಮಿನಲ್​ನಲ್ಲೇ ಬಿಟ್ಟು ಟೇಕಾಫ್​ ಆದ ವಿಮಾನ; ಎಡವಟ್ಟು ಮಾಡಿಕೊಂಡಿದ್ದ ಸಿಬ್ಬಂದಿ ಅಮಾನತು

    ಮಕ್ಕಳಿಬ್ಬರನ್ನು ಕೊಂದು ಪತ್ನಿಯೊಂದಿಗೆ ಸಾವಿನ ಶರಣಾದ ಬಿಜೆಪಿ ನಾಯಕ: ಟ್ವೀಟ್​ನಲ್ಲಿತ್ತು ಸಾವಿನ ರಹಸ್ಯ

    ನರೇಶ್​-ಪವಿತ್ರಾ ಲೋಕೇಶ್​ ಪ್ರಕರಣದಲ್ಲಿ ಸ್ಫೋಟಕ ಟ್ವಿಸ್ಟ್​: 3ನೇ ಪತ್ನಿ ವಿರುದ್ಧ ಗಂಭೀರ ಆರೋಪ ಮಾಡಿದ ನರೇಶ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts