ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ಯಾತ್ರೆಯ ಬೃಹತ್ ಸಮಾರೋಪ ಸಮಾವೇಶ ದಳಪತಿಗಳ ಶಕ್ತಿಪ್ರದರ್ಶನದ ಅನಾವರಣದಂತಿದ್ದು, ಇದರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅನಾರೋಗ್ಯದ ನಡುವೆಯೂ ಭಾಗಿಯಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.
ಸಮಾರೋಪ ಸಮಾರಂಭದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು, ನಾನು ಜೀವನದಲ್ಲಿ ಉಳಿದಿದ್ದು, ರಾಜಕೀಯದಲ್ಲಿ ಬೆಳೆದಿದ್ದು, ನಿಮ್ಮಿಂದ ಮತ್ತು ದೇವರ ಕೃಪೆಯಿಂದ ಎಂದು ಹೇಳಿದರು.
ಇದನ್ನೂ ಓದಿ: ಚುನಾವಣೆಗೆ ನಿಲ್ಲುವವರಿಗೂ ಇಲ್ಲಿ 5 ಲಕ್ಷ ರೂ. ಕೊಡ್ತಾರೆ!; ಷರತ್ತುಗಳೇನು?
ನನ್ನ ಈ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಧೃತಿಗೆಡದೆ ನಡೆಯಲು ಎರಡು ದೊಡ್ಡ ಶಕ್ತಿ ಎಂದರೆ ದೇವರು ಮತ್ತು ನಮ್ಮ ಕಾರ್ಯಕರ್ತರು. ನನಗೆ ತುಂಬಾ ಆರೋಗ್ಯ ಹದಗೆಟ್ಟಿತ್ತು. ನಿಮ್ಮನ್ನು ನೋಡುತ್ತೇನೋ ಇಲ್ಲವೋ ಎಂದು ಕೊಂಡಿದ್ದೆ. ಸದ್ಯ ಸ್ವಲ್ಪ ಚೇತರಿಕೆ ಕಂಡಿದ್ದೇನೆ. ಈ ಬಾರಿ ದೇವರ ಶಕ್ತಿ, ಕಾರ್ಯಕರ್ತರ ಶ್ರಮದಿಂದ ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಈ ಸಲ ಪ್ರಾದೇಶಿಕ ಪಕ್ಷಕ್ಕೇ ಸ್ಪಷ್ಟ ಬಹುಮತ: ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಎಚ್ಡಿಕೆ ವಿಶ್ವಾಸ
ನಾನು ಒಬ್ಬ ರೈತನ ಮಗ, ನೀವು ರೈತರ ಮಕ್ಕಳು. ಬಣ್ಣದ ನಾಟಕದ ಮಾತುಗಳಿಂದ ಯಾವುದೇ ಅಧಿಕಾರಕ್ಕೆ ಬಂದವರಲ್ಲ. ಕಾರ್ಯಕರ್ತ, ಮುಖಂಡರ ಶ್ರಮ, ದೇವರ ಶಕ್ತಿಯಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ಹೇಳಿದರು.
ಪ್ಯಾನ್-ಆಧಾರ್ ಲಿಂಕ್, ಮಾ. 31 ಕಡೇ ದಿನ: ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ?
ಆನ್ಲೈನ್ನಲ್ಲಿ ಐಫೋನ್ ಬುಕ್ ಮಾಡಿದ್ರೆ ಬಂದಿದ್ದು ನಿರ್ಮಾ ಸೋಪ್!; ಮುಂದೇನಾಯ್ತು?