More

    ಯಜ್ಞ ,ಯಾಗ ಮಾಡುವುದರಿಂದ ದೇವರು ನೆಲೆಸಲ್ಲ

    ಎನ್.ಆರ್.ಪುರ: ಸಮಾಜದ ಕಣ್ಣಾಗಿರುವ ಹೆಣ್ಣಿಗೆ ಗೌರವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಮುತ್ತಿನಕೊಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಆಶಾ ವಿಶ್ವನಾಥ್ ಹೇಳಿದರು.
    ಮಂಗಳವಾರ ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಆರೋಗ್ಯ ಇಲಾಖೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಹಾ ಪಾಪ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.
    ಮಹಿಳೆಯರನ್ನು ಗೌರವಿಸುವ ಕಡೆ ದೇವತೆಗಳು ನೆಲೆಸುತ್ತಾರೆ. ಮಹಿಳೆಯರಿಗೆ ಅಪಮಾನ ಮಾಡಿದರೆ, ದೌರ್ಜನ್ಯ ಮಾಡಿ ನಂತರ ಯಜ್ಞ ,ಯಾಗ ಮಾಡಿದರೆ ದೇವತೆಗಳು ನೆಲೆಸುವುದಿಲ್ಲ. ಇಂದು ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ಸ್ತ್ರೀಯರು ಸಂತೋಷವಾಗಿದ್ದರೆ ಅವಳ ಕುಟುಂಬವು ಸಂತೋಷವಾಗಿರುತ್ತದೆ. ಕುಟುಂಬದ ಜವಾಬ್ದಾರಿ ಹೊರುವ ಹೆಣ್ಣು ತಾಯಿಯಾಗಿ, ಪತ್ನಿಯಾಗಿ, ಸಹೋದರಿಯಾಗಿ, ಮಗಳಾಗಿ ತನ್ನ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುತ್ತಾಳೆ ಎಂದರು.
    ತಾಲೂಕು ಕಸಾಪ ಅಧ್ಯಕ್ಷ ಎಚ್.ಎಸ್.ಪೂರ್ಣೇಶ್ ಮಾತನಾಡಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವಿನೂತನ ಕಾರ್ಯಕ್ರಮ ನಡೆಸಿ ಕನ್ನಡ ಭಾಷೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ವಿಶೇಷ ಸ್ಪರ್ಧೆ ಏರ್ಪಡಿಸಲಾಗುವುದು. ತಾಲೂಕಿನಲ್ಲಿ ತೆರೆಮರೆಯಲ್ಲಿರುವ ಹಲವಾರು ಪ್ರತಿಭೆಗಳನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದರು.
    ಕಸಾಪ ಕಸಬಾ ಹೋಬಳಿ ಅಧ್ಯಕ್ಷೆ ಜುಬೇದಾ , ಜ್ವಾಲಾಮಾಲಿನಿ ಜೇಸಿ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಕೆ.ಗಂಗಾಧರ್, ಕಸಾಪ ಖಜಾಂಚಿ ಕೆ.ಎಸ್.ರಾಜಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts