More

    ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬನ್ನಿ ಎಂದ ತೆಲಂಗಾಣ ಸಚಿವ; ದಿಟ್ಟ ಉತ್ತರ ಕೊಟ್ಟ ಡಾ.ಕೆ.ಸುಧಾಕರ್

    ಬೆಂಗಳೂರು: ಸ್ಟಾರ್ಟಪ್​ ಆರಂಭಿಸಿ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೇ ಉದ್ಯಮ ನಡೆಸುತ್ತಿರುವ ವ್ಯಕ್ತಿಯೊಬ್ಬ, ಬೆಂಗಳೂರಿನ ಬಗ್ಗೆ ತೀರಾ ಕಳಪೆ ನಗರ ಎನ್ನುವ ರೀತಿಯಲ್ಲಿ ಮಾತನಾಡಿದ್ದು, ಅದಕ್ಕೆ ತೆಲಂಗಾಣದ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮಾತ್ರವಲ್ಲ, ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬನ್ನಿ ಎಂದೂ ಕರೆ ನೀಡಿದ್ದಾರೆ. ಇದನ್ನು ಗಮನಿಸಿದ ಸಚಿವ ಡಾ.ಕೆ. ಸುಧಾಕರ್ ಆ ಸಚಿವರಿಗೆ ದಿಟ್ಟ ಉತ್ತರವನ್ನೇ ನೀಡಿದ್ದಾರೆ.

    ಭಾರತದ ಸಿಲಿಕಾನ್ ವ್ಯಾಲಿ ಎನಿಸಿಕೊಂಡಿರುವ ಬೆಂಗಳೂರಿನ ಎಚ್​ಎಸ್​ಆರ್​/ಕೋರಮಂಗಲದಲ್ಲಿ ಸ್ಟಾರ್ಟಪ್​ಗಳಿಂದ ಭಾರಿ ತೆರಿಗೆ ಸಂಗ್ರಹವಾಗುತ್ತಿದ್ದರೂ ಕೆಟ್ಟ ರಸ್ತೆಗಳು, ದಿನಾ ವಿದ್ಯುತ್ ಕಡಿತ, ಅಸಮರ್ಪಕ ನೀರು ಪೂರೈಕೆ, ಬಳಸಲು ಯೋಗ್ಯವಲ್ಲದ ಪಾದಚಾರಿ ರಸ್ತೆಗಳಿವೆ. ಎಷ್ಟೋ ಗ್ರಾಮೀಣ ಪ್ರದೇಶಗಳು ಭಾರತದ ಸಿಲಿಕಾನ್ ವ್ಯಾಲಿಗಿಂತ ಉತ್ತಮ ಮೂಲಸೌಕರ್ಯಗಳನ್ನು ಹೊಂದಿವೆ ಎಂದು ಸ್ಟಾರ್ಟಪ್​ ಒಂದರ ಮಾಲೀಕ ತನ್ನ ಅನಿಸಿಕೆ ಹಂಚಿಕೊಂಡಿದ್ದರು.

    ಉದ್ಯಮಿಯ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ತೆಲಂಗಾಣದ ನಗರಾಭಿವೃದ್ಧಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಕೆ.ಟಿ.ರಾಮರಾವ್, ಗಂಟುಮೂಟೆ ಕಟ್ಟಿಕೊಂಡು ಹೈದರಾಬಾದ್​ಗೆ ಬನ್ನಿ. ನಮ್ಮಲ್ಲಿ ಉತ್ತಮ ಮೂಲಸೌಕರ್ಯ ಹಾಗೂ ಸಾಮಾಜಿಕ ಸೌಕರ್ಯವಿದೆ. ನಮ್ಮ ವಿಮಾನನಿಲ್ದಾಣ ಅತ್ಯುತ್ತಮವಾದವುಗಳಲ್ಲಿ ಒಂದು, ಸಿಟಿಯಿಂದ ಹೊರಗೆ ಹೋಗಿ ಬರುವುದು ಗಾಳಿಯಲ್ಲಿ ತೇಲಿದಂತೆ. ಎಲ್ಲಕ್ಕಿಂತ ಹೆಚ್ಚು ನಮ್ಮ ಸರ್ಕಾರ ಇನ್ನೋವೇಷನ್, ಇನ್​ಫ್ರಾಸ್ಟ್ರಕ್ಚರ್​, ಇನ್​ಕ್ಲೂಸಿವ್ ಗ್ರೋಥ್ ಎಂಬ ಮೂರು ಐ ಮಂತ್ರಗಳ ಮೇಲೆ ಕೇಂದ್ರಿತವಾಗಿದೆ ಎಂದು ಹೇಳಿದ್ದಾರೆ.

    ಕೆಟಿಆರ್​ ಹೇಳಿಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಕ್ಕ ಉತ್ತರ ನೀಡಿದ್ದು, ಕೆಟಿಆರ್ ಅವರೇ, ನಮ್ಮ ಬೆಂಗಳೂರಿನ ಸ್ಪರ್ಧೆ ಭಾರತದ ಯಾವುದೇ ರಾಜ್ಯ ಅಥವಾ ನಗರಗಳ ಜೊತೆಯಲ್ಲ, ನಮ್ಮ ಸ್ಪರ್ಧೆ ಏನಿದ್ದರೂ ಸಿಲಿಕಾನ್ ವ್ಯಾಲಿಗಳಾದ ಸಿಂಗಾಪುರ, ಟೆಲ್ ಅವೈವ್​ಗಳ ಜೊತೆ. ಬಹಳಷ್ಟು ದೇಶ-ರಾಜ್ಯಗಳ ಜನರಿಗೆ ಬೆಂಗಳೂರು ಆಶ್ರಯ-ಆತಿಥ್ಯ ನೀಡಿದೆ ಎಂಬ ಹೆಮ್ಮೆ ನಮಗಿದೆ ಎಂದು ಹೇಳಿದ್ದಾರೆ. ಬೆಂಗಳೂರನ್ನು ಟೀಕಿಸಿರುವ ಕನ್ನಡಿಗರು ಕೂಡ ಕಾಲೆಳೆಯುವ ಉತ್ತರವನ್ನು ನೀಡಿ ಎದಿರೇಟು ನೀಡಿದ್ದಾರೆ.

    ಇನ್ನು ಮ್ಯಾಂಗೋ ವಾರ್!?: ಹಲಾಲ್​-ಜಟ್ಕಾ ಬಳಿಕ ಮಾವಿಗೂ ಬಂತು ಧರ್ಮಸಂಘರ್ಷ..

    ಮಸೀದಿಗಳಲ್ಲಿನ ಮೈಕ್​ ವಿರುದ್ಧ ಶ್ರೀರಾಮಸೇನೆ ಗುಡುಗು; ನಿರ್ಬಂಧಿಸದಿದ್ದರೆ ದೇವಸ್ಥಾನಗಳಲ್ಲಿ ಮೈಕ್​ ಹಾಕಿ ಭಜನೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts