More

    ಯುದ್ಧಪೀಡಿತ ಇಸ್ರೇಲ್​ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರ: ಇಲ್ಲಿದೆ ಮಾಹಿತಿ

    ಬೆಂಗಳೂರು: ಇಸ್ರೇಲ್​ನಲ್ಲಿ ಮೊನ್ನೆ ಬೆಳ್ಳಂಬೆಳಗ್ಗೆ ಹಮಾಸ್ ಉಗ್ರರಿಂದ ನಡೆದ ರಣಭೀಕರ ದಾಳಿಗೆ ಯುದ್ಧೋನ್ಮಾದ ಪರಿಸ್ಥಿತಿ ಉಂಟಾಗಿದೆ. ಎರಡೂ ಕಡೆಯವರು ಸೇರಿ ಸಾವಿರಾರು ಮಂದಿ ಬಲಿಯಾಗಿದ್ದರೂ ರಣರಂಗವಾಗಿರುವ ಇಸ್ರೇಲ್ ಶಾಂತವಾಗಿಲ್ಲ. ಯುದ್ಧ ಪರಿಸ್ಥಿತಿ ಇನ್ನೂ ಮುಂದುವರಿದಿದೆ.

    ಹೀಗೆ ರಣಗಂಭೀರ ಪರಿಸ್ಥಿತಿಯಲ್ಲಿರುವ ಇಸ್ರೇಲ್​ನಲ್ಲಿ ಕನ್ನಡಿಗರನೇಕರು ಸಿಲುಕಿದ್ದಾರೆ ಎನ್ನಲಾಗಿದ್ದು, ಅವರ ನೆರವಿಗಾಗಿ ಕರ್ನಾಟಕ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಲ್ಲದೆ ಸರ್ಕಾರದಿಂದ ಹೆಲ್ಪ್​ಲೈನ್ ಆರಂಭಿಸಿದ್ದಾಗಿಯೂ ತಿಳಿಸಿದ್ದಾರೆ.

    ಸಹಾಯವಾಣಿ ಸಂಖ್ಯೆಗಳು

    • 080 22340676
    • 080 22253707

    ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ ಎಂದು ಸಿಎಂ ಹೇಳಿದ್ದಾರೆ.

    ಅಲ್ಲದೆ ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂಬ ಭರವಸೆಯನ್ನೂ ನೀಡಿದ್ದು, ಸಹಾಯವಾಣಿಯ ಮಾಹಿತಿಯನ್ನು ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ.

    ಯುದ್ಧಪೀಡಿತ ಇಸ್ರೇಲ್​ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರ: ಇಲ್ಲಿದೆ ಮಾಹಿತಿ

    ಖಿನ್ನತೆ ತಲೆಯ ಸಮಸ್ಯೆ, ಅದಾಗ್ಯೂ ಪರಿಹಾರ ಕಾಲುಗಳಲ್ಲಿದೆ!; ಅಧ್ಯಯನದಲ್ಲಿ ಬಹಿರಂಗ

    ಇವರೆಲ್ಲ ದುಡಿಯದೇ ಕೋಟ್ಯಧಿಪತಿಗಳು; ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡಿದ್ರೆ ಕೋಟಿಗಟ್ಟಲೆ ಹಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts