ಅಸ್ವಸ್ಥ ಮಹಿಳೆಗೆ ದೊರೆಯಿತು ಆಸರೆ

blank
blank

ಗೊಳಸಂಗಿ: ತಹಸೀಲ್ದಾರ್ ಎಂ.ಎನ್. ಚೋರಗಸ್ತಿ ಸೂಚನೆ ಹಿನ್ನೆಲೆ ವಿಜಯಪುರದ ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿ ಗ್ರಾಮದಲ್ಲಿ ಅನಾಥವಾಗಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಸೋಮವಾರ ತಮ್ಮ ಸುಪರ್ದಿಗೆ ಪಡೆದರು.
ಕೆಲ ದಿನಗಳ ಹಿಂದೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ-50ರ ಬಳಿ ತಿರುಗಾಡುತ್ತಿದ್ದ ಮಹಿಳೆಯನ್ನು ರಕ್ಷಿಸಿ ಗ್ರಾಮದ ಮಾದರಿ ಬಡಾವಣೆಯ ನಿವಾಸಿ ಮುನೀರ್‌ಅಹ್ಮದ ಬಿಜಾಪುರ ರಕ್ಷಿಸಿ ಆಶ್ರಯ ನೀಡಿದ್ದರು. ಮಹಿಳೆಗೆ ಶಾಶ್ವತ ರಕ್ಷಣೆ ಒದಗಿಸುವಂತೆ ಹತ್ತಿರದ ಕೂಡಗಿ ಎನ್‌ಟಿಪಿಸಿ ಪೊಲೀಸ್ ಠಾಣೆ, ವಿಜಯಪುರದ ಮಹಿಳಾ ಸಾಂತ್ವನ ಕೇಂದ್ರ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿದರೂ ಸ್ಪಂದಿಸಿರಲಿಲ್ಲ.
ಈ ಸಮಸ್ಯೆ ಕುರಿತು ವಿಜಯವಾಣಿ ೆ.3 ರಂದು ‘ಅನಾಥ ಮಹಿಳೆಗೆ ಗತಿ ಯಾರು?’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ನಂತರ ಬಸವನಬಾಗೇವಾಡಿ ತಹಸೀಲ್ದಾರ್ ಕಚೇರಿಗೆ ಮಹಿಳೆಯ ಸ್ಥಿತಿಗತಿ ಕುರಿತು ಮನವರಿಕೆ ಮಾಡಲಾಗಿತ್ತು. ಕೂಡಲೇ ‘ವಿಜಯವಾಣಿ’ ಕಳಕಳಿಗೆ ಸ್ಪಂದಿಸಿದ ತಹಸೀಲ್ದಾರ್ ಮಹಿಳೆಯ ರಕ್ಷಣೆಗೆ ಕ್ರಮ ಕೈಗೊಂಡಿದ್ದಾರೆ.

ಮಾನಸಿಕ ಅಸ್ವಸ್ಥ ಮಹಿಳೆಯನ್ನು ವಿಚಾರಿಸಿ ನ್ಯಾಯಾಲಯದ ಗಮನಕ್ಕೆ ತರಲಾಗುವುದು. ಮುಂದೆ ತಹಸೀಲ್ದಾರ್ ನಿರ್ದೇಶನದಂತೆ ನೊಂದ ಮಹಿಳೆಗೆ ಸೂಕ್ತ ರಕ್ಷಣೆ ನೀಡಲಾಗುವುದು.
ರಾಜು ಚವಾಣ್, ನಿರಾಶ್ರಿತರ ಪರಿಹಾರ ಕೇಂದ್ರ ಮೇಲ್ವಿಚಾರಕ, ವಿಜಯಪುರ

Share This Article

ನೀರು, ಸೋಪು ಇಲ್ಲದೆ ಕೊಳಕಾದ ಸ್ವಿಚ್‌ಬೋರ್ಡ್‌ನ್ನು ಹೊಸದರಂತೆ ಮಾಡಲು ಇಲ್ಲಿದೆ ಸೂಪರ್‌ ಟಿಪ್ಸ್‌ | Switchboard

Switchboard: ಸಾಮಾನ್ಯವಾಗಿ ಮನೆಗಳಲ್ಲಿರುವ ವಿದ್ಯುತ್ ಸ್ವಿಚ್‌ಬೋರ್ಡ್‌ಗಳು ದಿನ ಕಳೆದಂತೆ ಕೊಳಕಾಗುತ್ತದೆ. ವಿಶೇಷವಾಗಿ ಅಡುಗೆಮನೆಯಲ್ಲಿರುವ ಸ್ವಿಚ್‌ಬೋರ್ಡ್‌ಗಳು ಬಹಳ…

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…