More

    ಸಿಎಂ ಕಾರ್ಯಕ್ರಮದಲ್ಲೇ ಕಳ್ಳರ ಕೈ ಚಳಕ; ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆಯ ಚಿನ್ನದ ಸರ ಕಳವು..

    ಬೆಳಗಾವಿ: ಸಾಮಾನ್ಯವಾಗಿ ಗರಿಷ್ಠ ಭದ್ರತೆ ಇರುವ ಮುಖ್ಯಮಂತ್ರಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲೇ ಕಳ್ಳರು ಕೈಚಳಕ ತೋರಿದ ಪ್ರಕರಣವೊಂದು ನಡೆದಿದೆ. ಅದರಲ್ಲೂ ರಾಜಕಾರಣಿಯೊಬ್ಬರೇ ಚಿನ್ನ ಕಳೆದುಕೊಂಡಂಥ ಪ್ರಕರಣ ಇದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು, ಈ ಕಾರ್ಯಕ್ರಮದಲ್ಲೇ ಹಾಜರಿದ್ದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆಯ ಸರಕ್ಕೇ ಕಳ್ಳರು ಕೈ ಹಾಕಿದ್ದರು. ರಾಮದುರ್ಗ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶಾಂತಾಬಾಯಿ ಬೊಮ್ಮಣ್ಣವರ ಸರ ಕಳೆದುಕೊಂಡವರು.

    ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ಇಂದು ಈ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಶಾಂತಾಬಾಯಿ ಕೂಡ ಪಾಲ್ಗೊಂಡಿದ್ದು, ಕಾರ್ಯಕ್ರಮದ ಬಳಿಕ ಸಿಎಂ ಬೊಮ್ಮಾಯಿ ಮರಳುವಾಗ ಉಂಟಾದ ಗದ್ದಲದಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಪರಿಣಾಮವಾಗಿ, ಶಾಂತಾಬಾಯಿ ಅವರು 40 ಗ್ರಾಂ ತೂಕದ ಚಿನ್ನದ ಸರ ಕಳ್ಳತನಕ್ಕೆ ಒಳಗಾಗಿದೆ.

    ನಿಮ್ಮ ದಾಖಲೆಗಳನ್ನು ನೀಡಿ ಬೇರೆ ಯಾರೋ ಸಿಮ್​ ಪಡೆದಿರಬಹುದು!; ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts